Advertisement

ರಮೇಶಗೆ ಡಿಸಿಎಂ ಸ್ಥಾನ ನೀಡಲಿ: ಕುಮಠಳ್ಳಿ

11:44 PM Jun 03, 2019 | Lakshmi GovindaRaj |

ಬೆಳಗಾವಿ: ಗೋಕಾಕ ಶಾಸಕ ರಮೇಶ ಜಾರಕಿಹೊಳಿಗೆ ಸಮ್ಮಿಶ್ರ ಸರಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಅವರ ಆಪ್ತ ಶಾಸಕರು ಎಂದೇ ಗುರುತಿಸಿಕೊಂಡಿರುವ ಅಥಣಿಯ ಮಹೇಶ ಕುಮಠಳ್ಳಿ ರಮೇಶ ಪರ ಬ್ಯಾಟ್‌ ಬೀಸಿದ್ದಾರೆ.

Advertisement

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ರಮೇಶ ಜಾರಕಿಹೊಳಿ ಲಕ್ಷ್ಮಣರೇಖೆ ದಾಟಿಲ್ಲ. ದಾಟುವುದೂ ಇಲ್ಲ ಎಂದು ಗೃಹಸಚಿವ ಎಂ.ಬಿ.ಪಾಟೀಲರ ಹೇಳಿಕೆಗೆ ತಿರುಗೇಟು ನೀಡಿದರು. ರಮೇಶ ನಮ್ಮ ನಾಯಕರು. ಅವರು ಎಲ್ಲಿಯೂ ಹೋಗಿಲ್ಲ. ಪಕ್ಷದಲ್ಲಿಯೇ ಇದ್ದಾರೆ. ಅವರಿಗೆ ಯಾವುದೇ ರೀತಿಯ ಸಿಟ್ಟೂ ಇಲ್ಲ. ಕೆಲವರು ವಿನಾಕಾರಣ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ.

ಮೈತ್ರಿ ಸರ್ಕಾರದಲ್ಲಿ ರಮೇಶ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿದರೆ ಉತ್ತಮ. ಯಾವ ಜವಾಬ್ದಾರಿ ಕೊಟ್ಟರೂ ಅವರು ಸಮರ್ಥವಾಗಿ ನಿಭಾಯಿಸುತ್ತಾರೆ. ನಾನು ಯಾವುದೇ ಸಚಿವ ಸ್ಥಾನ, ನಿಗಮ ಅಥವಾ ಮಂಡಳಿಯ ಅಧ್ಯಕ್ಷ ಗಾದಿಯ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next