Advertisement

ಇನ್ನೋವಾ ಕಾರಿನಲ್ಲಿ ಕುಖ್ಯಾತ ಕ್ರಿಮಿನಲ್‌ನ ಮೃತದೇಹ ಪತ್ತೆ

09:59 AM Feb 03, 2020 | sudhir |

ಬಂಟ್ವಾಳ: ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಬೊಳ್ಳಾಯಿ ಸಮೀಪದ ನಗ್ರಿ ಶಾಂತಿನಗರದಲ್ಲಿ ರವಿವಾರ ಇನ್ನೋವಾ ಕಾರಿನಲ್ಲಿ ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಕೊಲೆಯಾದ ವ್ಯಕ್ತಿ ಕೇರಳ ಮೂಲದ ಕುಖ್ಯಾತ ಕ್ರಿಮಿನಲ್‌, ಮೂಲತಃ ಕಾಸರಗೋಡು ಜಿಲ್ಲೆ ಚೆಮ್ನಾಡ್‌ ಚೆಂಬರಿಕದ ಕಲಾ°ಡ್‌ ಗ್ರಾಮ ನಿವಾಸಿ ತಸ್ಲೀಮ್‌ ಯಾನೆ ಮುತಾಸಿಮ್‌(39) ಎಂದು ಗುರುತಿಸಲಾಗಿದೆ.

Advertisement

ನಗ್ರಿ ಶಾಂತಿನಗರದಲ್ಲಿ ಮೃತದೇಹವಿರುವ ಕಾರೊಂದು ನಿಂತಿದೆ ಎಂಬ ಸುದ್ದಿ ರವಿವಾರ ಮಧ್ಯಾಹ್ನ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಪ್ರಾರಂಭದಲ್ಲಿ ಅದು ಅಪರಿಚಿತ ಶವವೆಂದು ಭಾವಿಸಿದ್ದರೂ, ಬಳಿಕ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿತ್ತು. ತಸ್ಲೀಮ್‌ ಎರಡು ದಿನಗಳ ಹಿಂದೆ ಗುಲ್ಬರ್ಗಾ ಜೈಲಿನಿಂದ ಬಿಡುಗಡೆಗೊಂಡಿದ್ದು, ಅಲ್ಲಿಂದಲೇ ಆತನನ್ನು ಅಪಹರಣ ಮಾಡಿದ್ದ ಗ್ಯಾಂಗ್‌ ಕೊಲೆ ನಡೆಸಿದೆ.

ಆರೋಪಿಗಳು ಕೊಲೆ ನಡೆಸಿ ಮೃತದೇಹವನ್ನು ಕಾರಿನಲ್ಲಿಟ್ಟು, ಕಾರನ್ನು ಬಿಟ್ಟು ಪರಾರಿಯಾಗಿದ್ದರು. ಬೆಳಗ್ಗಿನಿಂದ ಕಾರು ಅಲ್ಲೇ ನಿಂತಿರುವುದನ್ನು ಕಂಡ ಸ್ಥಳೀಯರು ಮಧ್ಯಾಹ್ನದ ವೇಳೆಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೆಎ 53 ನೋಂದಣಿ ಹೊಂದಿರುವ ಇನ್ನೋವಾ ಕಾರಿನ ಹಿಂಬದಿಯ ಸೀಟಿನಲ್ಲಿ ಮೃತದೇಹ ಪತ್ತೆಯಾಗಿದ್ದು, ರಕ್ತದ ಮಡುವಿನಲ್ಲಿ ತುಂಬಿತ್ತು. ವ್ಯಕ್ತಿಯ ಕುತ್ತಿಗೆಗೆ ಹಗ್ಗ ಬಿಗಿದು ಬಳಿಕ ಚೂರಿ ಹಾಕಿ ಕೊಲೆ ನಡೆಸಿರುವ ಕುರಿತು ಶಂಕಿಸಲಾಗಿದೆ. ಬೇರೆ ಯಾವುದೇ ಸ್ಥಳದಲ್ಲಿ ಕೊಲೆ ನಡೆಸಿ, ಕಾರನ್ನು ನಗ್ರಿ ಶಾಂತಿನಗರದಲ್ಲಿ ಬಿಟ್ಟು ಪರಾರಿಯಾಗಿರುವ ಸಾಧ್ಯತೆಯ ಕುರಿತು ಹೇಳಲಾಗುತ್ತಿದೆ.

ಮಾರ್ನಬೈಲು-ಸಾಲೆತ್ತೂರು ರಸ್ತೆಯ ಶಾಂತಿನಗರದ ಗುಡ್ಡದಲ್ಲಿ ಕಾರನ್ನು ನಿಲ್ಲಿಸಲಾಗಿದ್ದು, ಬೆಳಗ್ಗೆ 8ರ ಸುಮಾರಿಗೆ ಅಲ್ಲಿ ಯಾವುದೇ ಕಾರು ಇರಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಹೀಗಾಗಿ ಆ ಬಳಿಕವೇ ಆರೋಪಿಗಳು ಕಾರನ್ನು ನಿಲ್ಲಿಸಿ ಪರಾರಿಯಾಗಿರುವ ಕುರಿತು ಸಂಶಯಿಸಲಾಗಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರು ವೆನಾÉಕ್‌ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಬಂಟ್ವಾಳ ಡಿವೈಎಸ್‌ಪಿ ವೆಲೆಂಟೈನ್‌ ಡಿಸೋಜಾ ಮಾಹಿತಿ ನೀಡಿದ್ದಾರೆ.

Advertisement

ಘಟನಾ ಸ್ಥಳಕ್ಕೆ ದ.ಕ.ಜಿಲ್ಲಾ ಚಾರ್ಜ್‌ನಲ್ಲಿರುವ ಉಡುಪಿ ಎಸ್‌ಪಿ ವಿಷ್ಣುವರ್ಧನ್‌, ದ.ಕ.ಅಡಿಶನಲ್‌ ಎಸ್‌ಪಿ ಡಾ| ವಿಕ್ರಂ ಅಮ್ಟೆ, ಮಂಗಳೂರು ಡಿಸಿಐಬಿ ಇನ್ಸ್‌ಪೆಕ್ಟರ್‌ ಚೆಲುವರಾಜು, ಬಂಟ್ವಾಳ ಪೊಲೀಸ್‌ ಸರ್ಕಲ್‌ ಇನ್ಸ್‌ಪೆಕ್ಟರ್‌ ಟಿ.ಡಿ.ನಾಗರಾಜ್‌, ಬಂಟ್ವಾಳ ನಗರ ಪಿಎಸ್‌ಐ ಅವಿನಾಶ್‌, ಗ್ರಾಮಾಂತರ ಪಿಎಸ್‌ಐ ಪ್ರಸನ್ನ ಹಾಗೂ ಸಿಬಂದಿ ತೆರಳಿದ್ದು, ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.

ಜ್ಯುವೆಲ್ಲರಿ ಕಳವಿನ ಪ್ರಮುಖ ಆರೋಪಿ
ಕೊಲೆಯಾದ ತಸ್ಲೀಮ್‌ 2019ರಲ್ಲಿ ಸೆಪ್ಟೆಂಬರ್‌ನಲ್ಲಿ ಮಂಗಳೂರು ಭವಂತಿ ಸ್ಟ್ರೀಟ್ ನ ಜ್ಯುವೆಲ್ಲರಿವೊಂದರಲ್ಲಿ ನಡೆದ ಕಳವು ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಇಬ್ಬರು ಅಪಾ^ನ್‌ ಮೂಲದ ಕುಖ್ಯಾತ ರೌಡಿಗಳ ಜತೆ ಸೇರಿ ಈ ಕಳವು ಪ್ರಕರಣ ನಡೆಸಿ, ಮಂಗಳೂರು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದ. ಜತೆಗೆ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಾಲಿಯಾ ರಫೀಕ್‌ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಎನ್ನಲಾಗಿದೆ.

ಈತ ಕಾಸರಗೋಡಿನಿಂದ ಮುಂಬಯಿಗೆ ತೆರಳಿದ ಬಳಿಕ ಅಲ್ಲಿ ಕುತ್ಯಾತ ರೌಡಿಗಳು ಹಾಗೂ ಭೂಗತ ಪಾತಕಿಗಳ ಸಂಪರ್ಕ ಬೆಳೆಸಿಕೊಂಡಿದ್ದ. ಈತನ ವಿರುದ್ಧ ಕಾಸರಗೋಡಿನ ಬೇಕಲ ಪೊಲೀಸ್‌ ಠಾಣೆ, ಉಳ್ಳಾಲ ಪೊಲೀಸ್‌ ಠಾಣೆ ಸೇರಿದಂತೆ ಹೊಸದಿಲ್ಲಿಯ ವಿಶೇಷ ಪೊಲೀಸ್‌ ಠಾಣೆಯಲ್ಲಿ ಕ್ರಿಮಿನಲ್‌ ಒಳಸಂಚು ಮತ್ತು ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಕುರಿತು ಕಳೆದ ಸೆಪ್ಟೆಂಬರ್‌ನ ಜ್ಯುವೆಲ್ಲರಿ ಕಳವು ಪ್ರಕರಣದ ಸಂದರ್ಭ ಮಂಗಳೂರು ಪೊಲೀಸರು ತಿಳಿಸಿದ್ದರು.

ತಸ್ಲೀಮ್‌ ಕೆಲ ದಿನಗಳ ಹಿಂದೆಯಷ್ಟೇ ಗುಲಾºರ್ಗಾ ಜೈಲಿನಿಂದ ಬಿಡುಗಡೆಗೊಂಡು ಹೊರ ಬರುತ್ತಿದ್ದಂತೆ ಆತನನ್ನು ಯಾವುದೇ ತಂಡವೊಂದು ಅಪಹರಣ ನಡೆಸಿತ್ತು. ಈ ಕುರಿತು ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಿಡ್ನಾಪ್‌ ಆರೋಪಿಗಳ ಹುಡುಕಾಟದಲ್ಲಿ ತೊಡಗಿದ್ದರು. ಯಾವುದೋ ಹಳೆ ಪ್ರಕರಣದ ದ್ವೇಷದ ಹಿನ್ನೆಲೆಯಲ್ಲೇ ಕೊಲೆ ನಡೆದಿರುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next