Advertisement

ಮೀಸಲಾತಿ ಬೇಡಿಕೆಗೆ ಗಡುವು ಸರಿಯಲ್ಲ: ಸಚಿವ ಸಿ.ಸಿ.ಪಾಟೀಲ್‌

10:13 PM Jan 06, 2023 | Team Udayavani |

ಬೆಂಗಳೂರು: ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿಗಳು ನೀಡಿರುವ 24 ಗಂಟೆ ಗಡುವು ವಾಪಸ್‌ ಪಡೆಯಬೇಕೆಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್‌ ತಿಳಿಸಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿ, ಸಮುದಾಯಕ್ಕೆ ಮೀಸಲಾತಿ ಸಂಬಂಧ ಸದ್ಯದಲ್ಲಿಯೇ ಸಿಹಿ ಸುದ್ದಿ ಸಿಗಲಿದೆ. ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಮಧ್ಯಂತರ ವರದಿ ಕೊಡಲಾಗಿದೆ. ಸ್ವಾಮೀಜಿಗಳು 24 ಗಂಟೆ ಗಡುವು ಕೊಟ್ಟಿದ್ದು ಸರಿಯಲ್ಲ. ಮೀಸಲಾತಿ ಬೇಡಿಕೆ ಈಡೇರಿಸುವ ಬಗ್ಗೆ ಮುಖ್ಯಮಂತ್ರಿ ಭಾವನಾತ್ಮಕವಾಗಿ ಮಾತಾಡಿದ್ದಾರೆ. ನಂತರ ಹೋರಾಟಗಾರರನ್ನು ಭೇಟಿ ಮಾಡಿ ಸಂಪುಟದ ನಿರ್ಧಾರ ತಿಳಿಸಲಾಗಿದೆ. ಸಮುದಾಯಕ್ಕೆ ಕಾನೂನಾತ್ಮಕ ಮೀಸಲಾತಿ ಕೊಡೋದು ಮುಖ್ಯಮಂತ್ರಿಗಳ ಉದ್ದೇಶ. 2ಎ ಗೆ ಸೇರಿಸಬಾರದು ಅನ್ನುವ ಉದ್ದೇಶ ಇರಲಿಲ್ಲ ಎಂದು ಸ್ಪಷ್ಟಪಡಿಸಿದರು.

24 ಗಂಟೆಯೊಳಗೆ ಯಾವುದೇ ತೀರ್ಮಾನ ಕೈಗೊಳ್ಳಲು ಆಗಲ್ಲ. ಸ್ವಾಮೀಜಿಗಳು, ಹೋರಾಟಗಾರರು ಸರ್ಕಾರದ ಜತೆ ಚರ್ಚೆ ಮಾಡೋಣ. ಮುಖ್ಯಮಂತ್ರಿಗಳ ಜತೆ ಸಮಯ ನಿಗದಿ ಮಾಡುತ್ತೇವೆ. ಮೀಸಲಾತಿ ವಿಚಾರದಲ್ಲಿ ಸರಿಯಾದ ಮಾರ್ಗದಲ್ಲಿ ಸರ್ಕಾರ ಸಾಗುತ್ತಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next