Advertisement

ಗಾಂಜಾ ಮತ್ತಲ್ಲಿ ಮಾರಣಾಂತಿಕ ದಾಳಿ: ಪೊಲೀಸ್‌ ಗಂಭೀರ

10:00 AM Jan 17, 2018 | Team Udayavani |

ಬೆಂಗಳೂರು: ನಗರದಲ್ಲಿ ದುಷ್ಕರ್ಮಿಗಳು ರಾತ್ರಿ ಗಸ್ತು ತಿರುಗುತ್ತಿದ್ದ ಪೊಲೀಸ್‌ ಪೇದೆಯೊಬ್ಬರ ಮೇಲೆ ಮಾರಣಾಂತಿಕ ದಾಳಿ ನಡೆಸಿದ ಕಳವಳಕಾರಿ  ಘಟನೆ ಬುಧವಾರ ರಾತ್ರಿ ನಡೆದಿದೆ.  

Advertisement

ಪಾದರಾಯನಪುರದ 11ನೇ ಕ್ರಾಸ್‌ನಲ್ಲಿ  ಘಟನೆ ನಡೆದಿದ್ದು ಹೊಯ್ಸಳ ಪೊಲೀಸ್‌ ವಾಹನದಲ್ಲಿ ಬಂದ ಪೇದೆ ರಾಜೇಂದ್ರ ಅವರ  ಮೇಲೆ ಗಾಂಜಾ ಮತ್ತಿನಲ್ಲಿದ್ದ ದುಷ್ಕರ್ಮಿಗಳು ಲಾಂಗು ಮಚ್ಚುಗಳಿಂದ ಹಲ್ಲೆ ಗೈದು ಪರಾರಿಯಾಗಿದ್ದಾರೆ.

ಗಂಭೀರವಾಗಿ  ಗಾಯಗೊಂಡಿರುವ ರಾಜೇಂದ್ರ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಜೆ.ಜೆ.ನಗರ ಠಾಣಾ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು,ದುಷ್ಕರ್ಮಿಗಳ ಪತ್ತೆಗಾಗಿ ಕಾರ್ಯಾಚರಣೆಗಿಳಿದಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next