Advertisement

ಅಪಘಾತದಲ್ಲಿ ಯುವಕ ಸಾವು

12:23 PM Mar 31, 2019 | Team Udayavani |

ಬೆಂಗಳೂರು: ಒನ್‌ ವೇನಲ್ಲಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಜೆಸಿಬಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ಕುಮಾರಸ್ವಾಮಿ ಲೇಔಟ್‌ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

Advertisement

ಬಾಗಲಗುಂಟೆ ನಿವಾಸಿ ರಕ್ಷಿತ್‌ಗೌಡ (23) ಮೃತ ಯುವಕ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಮೂಲದ ರಕ್ಷಿತ್‌, ಕಳೆದ ಕೆಲ ವರ್ಷಗಳಿಂದ ಬಾಗಲಗುಂಟೆಯಲ್ಲಿರುವ ದೊಡ್ಡಪ್ಪನ ಮನೆಯಲ್ಲಿ ವಾಸವಿದ್ದು, ಡಿಪ್ಲೊಮಾ ವ್ಯಾಸಂಗ ಮುಗಿಸಿದ್ದಾರೆ.

ಶನಿವಾರ ಬೆಳಗ್ಗೆ ತಲ್ಲಘಟ್ಟಪುರದಲ್ಲಿರುವ ಸಂಬಂಧಿ ಮನೆಗೆ ಹೋಗಲು ಬಾಗಲಗುಂಟೆಯಿಂದ ನೈಸ್‌ ರಸ್ತೆ ಮಾರ್ಗವಾಗಿ ಸೋಂಪುರ ಟೋಲ್‌ ಕಡೆಯಿಂದ ಕನಕಪುರ ಟೋಲ್‌ ಕಡೆ ಹೋಗುವಾಗ ಒನ್‌ವೇನಲ್ಲಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಜೆಸಿಬಿ ರಕ್ಷಿತ್‌ನ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ರಕ್ಷಿತ್‌ ತಲೆಗೆ ಗಂಭೀರ ಪೆಟ್ಟಾಗಿದ್ದು, ಕೂಡಲೇ ಸಂಚಾರ ಪೊಲೀಸರು ಹಾಗೂ ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿದ್ದಾರೆ. ಕುಮಾರಸ್ವಾಮಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next