Advertisement

ಕಾರು ಪಲ್ಟಿಯಾಗಿ ಬೆಂಕಿ; ಬೆಂಗಳೂರಿನ ಒಂದೇ ಕುಟುಂಬದ ಐವರು ಸಜೀವ ದಹನ

10:15 AM Sep 15, 2019 | Nagendra Trasi |

ಚಿತ್ತೂರು/ಬೆಂಗಳೂರು:ತಿರುಪತಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಕಾರು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬೆಂಗಳೂರು ಮೂಲದ ಐವರು ಸಜೀವ ದಹನವಾದ ದಾರುಣ ಘಟನೆ ಶನಿವಾರ ಚಿತ್ತೂರಿನ ಪಲಮನೇರು ಮಂಡಲಂ ಬಳಿ ನಡೆದಿದೆ.

Advertisement

ಕಾರಿನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಾಗ ಬೆಂಕಿ ಹೊತ್ತಿಕೊಂಡಿತ್ತು. ಕಾರಿನಿಂದ ಹೊರ ಬರಲಾಗದೆ ಐವರು ಸಜೀವ ದಹನವಾಗಿದ್ದರು. ಒಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿ ತಿಳಿಸಿದೆ.

ಸಾವನ್ನಪ್ಪಿದವರನ್ನು ಬೆಂಗಳೂರಿನ ಜಾಹ್ನವಿ, ರಾಮ್, ಕಲಾ, ಸಾಯಿ ಆಶ್ರೀತ್ ಹಾಗೂ ಪವನ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next