Advertisement

ಮುಂಬೈ ನೌಕಾ ನೆಲೆಯಲ್ಲಿ ಕರ್ತವ್ಯದಲ್ಲಿದ್ದ ವಿಜಯಪುರ ಉದ್ಯೋಗಿ ಸಾವು

08:15 PM Jun 18, 2021 | Girisha |

ವಿಜಯಪುರ : ಮುಂಬೈನ ಭಾರತೀಯ ನೌಕಾದಳದ (ಇಂಡಿಯನ್ ನೇವಿ) ಸೇವೆಯಲ್ಲಿದ್ದ ಕರ್ತವ್ಯ ನಿರತ ವಿಜಯಪುರ ಜಿಲ್ಲೆಯ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜರುಗಿದೆ.

Advertisement

ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಬಸುರಾಜಗುರು ಅಶೋಕ ಹೂಗಾರ (25) ಹೃದಯಾಘಾತ ದಿಂದ ಮೃತಪಟ್ಟಿದ್ದಾರೆ.

ಕಳೆದ ತಿಂಗಳಷ್ಟೇ ರಜೆಯ ಮೇಲೆ ಊರಿಗೆ ಬಂದಿದ್ದ ಅವರ ಸಾವು ಕುಟುಂಬಕ್ಕೆ ಆಘಾತ ತಂದೊಡ್ಡಿದೆ. 4-5 ವರ್ಷಗಳ ಹಿಂದೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ನೌಕಾನೆಲೆಯಲ್ಲಿ ಸೇವೆಗೆ ಸೇರ್ಪಡೆಯಾಗಿದ್ದ ಅವರು 6 ತಿಂಗಳ ಹಿಂದೆ ಮುಂಬೈಗೆ ವರ್ಗಾವಣೆ ಆಯಾಗಿದ್ದರು.

ಮೃತರ ಪಾರ್ಥೀವ ಶರೀರ ಶನಿವಾರ ಸ್ವಗ್ರಾಮಕ್ಕೆ ಆಗಮಿಸುವ ನಿರೀಕ್ಷೆ ಇದೆ. ಮೃತರಿಗೆ ತಾಯಿ, ಸಹೋದರಿ ಇದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next