Advertisement

ಸಾವಿನ ಸಂಖ್ಯೆ 62ಕ್ಕೆ ಏರಿಕೆ

11:28 PM Aug 15, 2019 | Team Udayavani |

ಬೆಂಗಳೂರು: ರಾಜ್ಯದಲ್ಲಿ ಪ್ರವಾಹ ಸಂಕಷ್ಟಕ್ಕೆ ಸಿಲುಕಿ ಮೃತಪಟ್ಟವರ ಸಂಖ್ಯೆ 62ಕ್ಕೆ ಏರಿದೆ. 14 ಜನರು ಕಾಣೆಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ರಾಜ್ಯದ 22 ಜಿಲ್ಲೆಗಳ 103 ತಾಲೂಕುಗಳು ಪ್ರವಾಹಕ್ಕೆ ಸಿಲುಕಿಕೊಂಡಿದ್ದು, 6.97 ಲಕ್ಷ ಜನರನ್ನು ರಕ್ಷಣೆ ಮಾಡಲಾಗಿದೆ.

Advertisement

ನೆರೆ ಸಂತ್ರಸ್ತರಿಗೆ 943 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 3.57 ಲಕ್ಷ ಜನರು ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದು ಕೊಂಡಿದ್ದಾರೆ. ಪ್ರವಾಹದಿಂದ 867 ಜಾನುವಾರು ಗಳು ಜೀವ ಕಳೆದುಕೊಂಡಿದ್ದು,51,460 ಜಾನುವಾರು ಗಳನ್ನು ರಕ್ಷಣೆ ಮಾಡಲಾಗಿದೆ. 5.35 ಲಕ್ಷ ಹೆಕ್ಟೇರ್‌ ಕೃಷಿ ಹಾಗೂ ತೋಟಗಾರಿಕೆ ಬೆಳೆ ನಾಶವಾಗಿದ್ದು, 71,234 ಮನೆಗಳು ಹಾಳಾಗಿವೆ ಎಂದು ಸರ್ಕಾರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ

Advertisement

Udayavani is now on Telegram. Click here to join our channel and stay updated with the latest news.

Next