Advertisement

ರೈತರ ಮನೆ ಬಾಗಿಲಿಗೆ ಋಣಮುಕ್ತ ಪತ್ರ: ಕಾಶೆಂಪುರ್‌

06:35 AM Aug 13, 2018 | Team Udayavani |

ದಾವಣಗೆರೆ: ಮುಖ್ಯಮಂತ್ರಿ ಕುಮಾರಸ್ವಾಮಿಯವರು ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್‌ಗಳಲ್ಲಿನ ರೈತರ 40 ಸಾವಿರ ಕೋಟಿ ರೂಪಾಯಿಗಳಿಂತಲೂ ಹೆಚ್ಚು ಸಾಲ ಮನ್ನಾ ಮಾಡಿದ್ದಾರೆ. ರೈತರ ಮನೆ ಬಾಗಿಲುಗಳಿಗೆ ಋಣಮುಕ್ತ ಪತ್ರ ಕೊಡುತ್ತೇವೆ ಎಂದು ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಬಂಡೆಪ್ಪ ಕಾಶಂಪುರ್‌ ತಿಳಿಸಿದ್ದಾರೆ.

Advertisement

ನಗರದಲ್ಲಿ ಮಾತನಾಡಿ, ಕುಮಾರಸ್ವಾಮಿಯವರು ಬಡವರು, ರೈತರು, ದೀನ ದಲಿತರು, ಹಿಂದುಳಿದ ವರ್ಗದವರು, ಮಧ್ಯಮ ವರ್ಗದವರಿಗೆ ಹಲವಾರು ಜನಪರ ಯೋಜನೆಗಳ ಜಾರಿಗೆ ತರಲು ಚಿಂತನೆ ನಡೆಸಿದ್ದಾರೆ. ರೈತರ ಸಾಲಮನ್ನಾ ಬಗ್ಗೆ ಯಾವುದೇ ಅನುಮಾನ ಬೇಡ. ಸಾಲಮನ್ನಾ ಆಗಿರುವ ಋಣಮುಕ್ತ ಪತ್ರವನ್ನು ರೈತರ ಮನೆ ಬಾಗಿಲಿಗೆ ತಂದು ಕೊಡಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next