Advertisement

ಡಿಸೆಂಬರ್‌ ಒಳಗೆ ಸಾಲ ಮನ್ನಾ ಪೂರ್ಣ

12:30 AM Feb 19, 2019 | |

ಹಾಸನ: ಮುಂದಿನ ಡಿಸೆಂಬರ್‌ ಒಳಗೆ ರೈತರ ಬೆಳೆ ಸಾಲಮನ್ನಾ ಪೂರ್ಣಗೊಳ್ಳಲಿದೆ ಎಂದು ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

Advertisement

ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸಾಲಮನ್ನಾ ಫ‌ಲಾನುಭವಿ ರೈತರಿಗೆ ಋಣಮುಕ್ತ ಪ್ರಮಾಣಪತ್ರ ವಿತರಿಸಿ ಮಾತನಾಡಿದ ಅವರು, ರೈತರ ಸಾಲಮನ್ನಾದ ಮೊತ್ತವನ್ನು ಬ್ಯಾಂಕುಗಳಿಗೆ ನಾಲ್ಕು ಕಂತುಗಳಲ್ಲಿ ಪಾವತಿಸಲು ಈ ಹಿಂದೆ ಚಿಂತನೆ ನಡೆಸಲಾಗಿತ್ತು. ಆದರೆ ಈಗ ಎರಡು ಕಂತುಗಳಲ್ಲಿಯೇ ಸಾಲ ಮನ್ನಾದ ಕಂತುಗಳನ್ನು ಬ್ಯಾಂಕುಗಳಿಗೆ ಪಾವತಿಸಿ ಡಿಸೆಂಬರ್‌ ಒಳಗೆ ಸಾಲ ಮನ್ನಾ ಪೂರ್ಣಗೊಳಿಸಲಾಗುವುದು ಎಂದರು.

ಟೀಕಾಕಾರರಿಗೆ ಉತ್ತರ: ಸಾಲ ಮನ್ನಾಕ್ಕಾಗಿಯೇ ಫೆ.8 ರಂದು ಮಂಡಿಸಿದ ಬಜೆಟ್‌ನಲ್ಲಿ ಅನುದಾನ ನಿಗದಿ ಪಡಿಸುವ ಮೂಲಕ ಟೀಕಾಕಾರರಿಗೆ ಉತ್ತರ ನೀಡಿದ್ದೇನೆ ಎಂದ ಅವರು, ಇಂದು ಹಾಸನ ಜಿಲ್ಲೆಯ 2.20 ಲಕ್ಷ ರೈತ ಕುಟುಂಬಗಳ ಸುಮಾರು 1300 ಕೋಟಿ ರೂ. ಕೃಷಿ ಸಾಲ ಮನ್ನಾ ಮಾಡಿದ ಪ್ರಮಾಣ ಪತ್ರಗಳನ್ನು ವಿತರಿಸುವ ಮೂಲಕ ರಾಜ್ಯಕ್ಕೆ ಸಂದೇಶ ನೀಡಲಾಗಿದೆ ಎಂದರು.

ರಾಜ್ಯ ಒಡೆಯುವ ಕೆಲಸವನ್ನು ನಾವು ಎಂದೂ ಮಾಡಲ್ಲ. ರಾಜ್ಯದ ಸರ್ವತೋಮುಖ ಅಭಿವೃದ್ದಿಗೆ ಕೆಲಸ ಮಾಡುವವರು ನಾವು ಎಂಬುದನ್ನು ಉ.ಕ.ದಲ್ಲಿ ಕೈಗಾರಿಕಾ ಕ್ಲಸ್ಟರ್‌ಗಳ ಅಭಿವೃದ್ದಿಗೆ ಚಾಲನೆ ನೀಡುವ ಮೂಲಕ ಉತ್ತರ ನೀಡಿದ್ದೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next