Advertisement

ಸಾಲ ಮನ್ನಾ ರಾಜ್ಯದ ಹೊಣೆ: ಮುರಳೀಧರಾವ್‌

03:25 AM Jul 09, 2017 | |

ಚಿಕ್ಕಬಳ್ಳಾಪುರ: ರೈತರ ಸಾಲ ಮನ್ನಾ ಮಾಡುವ ಜವಾಬ್ದಾರಿ ಆಯಾ ರಾಜ್ಯ ಸರ್ಕಾರಗಳದ್ದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಮುರಳೀಧರಾವ್‌ ಪ್ರತಿಪಾದಿಸಿದ್ದಾರೆ.

Advertisement

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಮಧ್ಯಪ್ರದೇಶ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಕೇಂದ್ರ ಸರ್ಕಾರದ ನೆರವು ಇಲ್ಲದೇ ಆ ರಾಜ್ಯಗಳು ರೈತರ ಸಾಲ ಮನ್ನಾ ಮಾಡಿಲ್ಲವೇ? ಅದು ಕರ್ನಾಟಕದ ಕಾಂಗ್ರೆಸ್‌ ಸರ್ಕಾರಕ್ಕೆ ಏಕೆ ಸಾಧ್ಯವಾಗುವುದಿಲ್ಲ. ರೈತರ ಪರವಾಗಿ ಇಚ್ಚಾಶಕ್ತಿ ತೋರಿಸದೆ ಬರೀ ಕೇಂದ್ರದ ಕಡೆಗೆ ಬೆಟ್ಟು ತೋರಿಸಿ ತಪ್ಪಿಸಿಕೊಳ್ಳುವುದು ಸರಿಯಲ್ಲ. ಸರ್ಕಾರ ಕೂಡಲೇ ರೈತರ ಪರ ಬದ್ಧತೆ ಪ್ರದರ್ಶಿಸಿ, ಸಂಪೂರ್ಣ ಕೃಷಿ ಸಾಲ ಮನ್ನಾಗೆ ಮುಂದಾಗಲಿ ಎಂದು ಆಗ್ರಹಿಸಿದರು. ಆದರೆ, ರೈತರ ಸಾಲ ಮನ್ನಾ ಮಾಡುವುದು ಪ್ಯಾಷನ್‌ ಆಗಿಬಿಟ್ಟಿದೆ ಎಂಬ ಕೇಂದ್ರ ಸಚಿವ ವೆಂಕಟನಾಯ್ಡು ಹೇಳಿಕೆಗೆ ಮುರಳೀಧರಾವ್‌ ಯಾವುದೇ ಪ್ರತಿಕ್ರಿಯೆ ನೀಡದೇ ಜಾರಿಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next