Advertisement

ಡಿ. 2ರಂದು ನಟ ರಿಷಬ್‌ ಶೆಟ್ಟಿಗೆ ಸಿದ್ದಶ್ರೀ ಪ್ರಶಸ್ತಿ ಪ್ರದಾನ

11:40 PM Nov 26, 2022 | Team Udayavani |

ಕಲಬುರಗಿ: ಕಾಂತಾರ ಖ್ಯಾತಿಯ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರಿಗೆ ಡಿ.2ರಂದು ನಡೆಯಲಿರುವ ಶ್ರೀ ಷಡಕ್ಷರಿ ಶಿವಯೋಗಿ ಡಾ| ಮುರುಘ ರಾಜೇಂದ್ರ ಮಹಾ ಸ್ವಾಮಿಗಳ 38ನೇ ಗುರು ವಂದನಾ ಮಹೋತ್ಸವದಲ್ಲಿ ರಾಷ್ಟ್ರ ಮಟ್ಟದ ಸಿದ್ಧಶ್ರೀ ಪ್ರಶಸ್ತಿ ನೀಡಿ ಗೌರವಿಸ ಲಾಗುವುದು ಎಂದು ಗುರುವಂದನ ಸ್ವಾಗತ ಸಮಿತಿ ಗೌರವ ಅಧ್ಯಕ್ಷ ಅಭಿನವ ಶಿವಲಿಂಗ ಸ್ವಾಮೀಜಿ ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 38ನೇ ಗುರುವಂದನೆ ಮಹೋತ್ಸವದ ಅಂಗವಾಗಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಡಿ.1ರಂದು ಮುಗಳಖೋಡ ಶ್ರೀಮಠದ ಗೋ ಶಾಲೆಯಲ್ಲಿ 38 ಗೋಮಾತೆ ಪೂಜೆ ನೆರವೇರಿಸಲಾಗುವುದು. ಪರಿಸರ ಕಾಳಜಿಯ ಹಿನ್ನೆಲೆಯಲ್ಲಿ 5 ಸಾವಿರ ಸಸಿಗಳನ್ನು ನೆಡಲಾಗುವುದು.

ಮಹೋತ್ಸವದಲ್ಲಿ ಹರ-ಗುರು-ಚರ ಮೂರ್ತಿಗಳು ರಾಜಕೀಯ ಧುರೀಣರು ಉಪಸ್ಥಿತರಿರಲಿದ್ದು, ಐದು ರಾಜ್ಯಗಳಿಂದ 1.5 ಲಕ್ಷಕ್ಕೂ ಅಧಿಕ ಭಕ್ತರು ಪಾಲ್ಗೊಳ್ಳಲಿದ್ದಾರೆ. ಖ್ಯಾತ ಸಾಹಿತಿಗಳಾದ ವಿ.ನಾಗೇಂದ್ರ ಪ್ರಸಾದ ಮತ್ತು ಡಾ|ಶಿವಶಂಕರಪ್ಪ ಸಾಹುಕಾರ, ಕೆಪಿಎಸ್‌ಸಿ ಚೇರ್ಮನ್‌ ಅವರನ್ನು ವಿಶೇಷವಾಗಿ ಗೌರವಿಸಲಾಗುವುದು. ಸಂಜೆ ಖ್ಯಾತ ಹಿನ್ನೆಲೆ ಗಾಯಕರಾದ ವಿಜಯ ಪ್ರಕಾಶ ತಂಡದಿಂದ ಸ್ವರ ಸಂಗೀತ ಸಂಭ್ರಮ ಹಾಗೂ ಗುರುವಂದನ ಮಹೋತ್ಸವ ಹಾಗೂ ವಿವಿಧ ಸಾಂಸ್ಕೃತಿಕ ಕಲಾ ತಂಡಗಳಿಂದ ವಿಶೇಷ ಪ್ರತಿಭೆಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next