Advertisement

Supreme Court ಅನರ್ಹತೆ ಪ್ರಕರಣ: ಡಿ.31ರ ಗಡುವು

10:35 PM Oct 30, 2023 | Team Udayavani |

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಬಣದ ಶಿವಸೇನೆ ಶಾಸಕರ ಅನರ್ಹತೆ ಅರ್ಜಿಯನ್ನು ಡಿ.31ರೊಳಗೆ ಇತ್ಯರ್ಥಪಡಿಸಬೇಕು ಎಂದು ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ ರಾಹುಲ್‌ ನಾರ್ವೇಕರ್‌ ಅವರಿಗೆ ಸುಪ್ರೀಂ ಕೋರ್ಟ್‌ ಸೂಚಿಸಿದೆ.

Advertisement

ಉದ್ಧವ್‌ ಠಾಕ್ರೆ ಬಣ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ಡಿ.ವೈ.ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠ, ಸಂವಿಧಾನದ 10ನೇ ಪರಿಚ್ಛೇದದ ಪಾವಿತ್ರ್ಯತೆ ಕಾಪಾಡಿಕೊಳ್ಳಬೇಕು. ಅನರ್ಹತೆ ಅರ್ಜಿಗಳನ್ನು ನಿರ್ಧರಿಸಲು ವಿಳಂಬ ಮಾಡಬಾರದು ಎಂದು ಹೇಳಿತು.

ಇದೇ ವೇಳೆ, ಅಜಿತ್‌ ಪವಾರ್‌ ಬಣದ 9 ಮಂದಿ ಎನ್‌ಸಿಪಿ ಶಾಸಕರ ಅನರ್ಹತೆಗೆ ಸಂಬಂಧಿಸಿದ ಅರ್ಜಿಯನ್ನು 2024ರ ಜ.31ರೊಳಗೆ ಇತ್ಯರ್ಥಪಡಿಸಬೇಕು ಎಂದು ಸ್ಪೀಕರ್‌ಗೆ ನ್ಯಾಯಪೀಠ ನಿರ್ದೇಶಿಸಿತು.

 

Advertisement

Udayavani is now on Telegram. Click here to join our channel and stay updated with the latest news.

Next