Advertisement
ಕಳೆದ ವರ್ಷ, ಗುರುಗ್ರಾಮದ ಶಾಲೆಯಲ್ಲಿ ಬಾಲಕನೊಬ್ಬನನ್ನು ಅದೇ ಶಾಲೆಯ ವಿದ್ಯಾರ್ಥಿಯೊಬ್ಬ ಕೊಂದಿದ್ದ ಘಟನೆ ದೇಶಾದ್ಯಂತ ತಲ್ಲಣ ಸೃಷ್ಟಿಸಿತ್ತು. ಈ ಹಿನ್ನೆಲೆಯಲ್ಲಿ, ಬಾಲಕನ ತಂದೆ ಶಾಲೆಗಳಲ್ಲಿ ವಿದ್ಯಾರ್ಥಿಗಳ ಭದ್ರತೆಗಾಗಿ ಕೈಗೊಳ್ಳಬೇಕಾದ ನಿಯಮಾವಳಿಗಳನ್ನು ರೂಪಿಸಬೇಕೆಂದು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಇದರ ಜವಾಬ್ದಾರಿಯನ್ನು ಕೇಂದ್ರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಗೆ ವಹಿಸಿದೆ. ಈ ಹಿಂದೆ, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರಗಳಿಗೂ ನಿಯಮಾವಳಿ ರೂಪಿಸುವಂತೆ ನ್ಯಾಯಪೀಠ ಸೂಚಿಸಿತ್ತು. ಈವರೆಗೆ ಕರ್ನಾಟಕ, ಹರಿಯಾಣ ಹಾಗೂ ಹಿಮಾಚಲ ಪ್ರದೇಶ ಸರಕಾರಗಳು ಮಾತ್ರ ಸ್ಪಂದಿಸಿವೆ. Advertisement
ಶಾಲೆಗಳಲ್ಲಿ ಭದ್ರತಾ ಸೂತ್ರಗಳ ಅಳವಡಿಕೆಗೆ ಸುಪ್ರೀಂ ಸೂಚನೆ
09:40 AM Apr 18, 2018 | Karthik A |
Advertisement
Udayavani is now on Telegram. Click here to join our channel and stay updated with the latest news.