Advertisement

ಉಪಚುನಾವಣೆ ಘೋಷಣೆ ಬಳಿಕ ನಿರ್ಧಾರ ಹೇಳ್ತೀನಿ

03:36 PM Jan 31, 2021 | Team Udayavani |

ಬೆಳಗಾವಿ: ಲೋಕಸಭೆ ಉಪಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆ ಬಗ್ಗೆ ಹೈಕಮಾಂಡ್‌ ನಿರ್ಧಾರದ ಮೇಲೆ ಮುಂದಿನ ನಿರ್ಧಾರವನ್ನು ನಾನು ಕೈಗೊಳ್ಳಲಿದ್ದೇನೆ ಎಂದು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹೇಳಿದರು.

Advertisement

ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಘೋಷಣೆ ಕೆಲವೇ ದಿನಗಳಲ್ಲಿ ಆಗುವ ಸಾಧ್ಯತೆ ಇದೆ. ನಂತರ ನನ್ನ ನಿರ್ಧಾರ ಘೋಷಿಸುತ್ತೇನೆ. ನಾನು ಉಪಚುನಾವಣೆಗೆ ಸ್ಪ ರ್ಧಿಸುವ ಬಗ್ಗೆ ಹಾಗೂ ದಿ. ಸುರೇಶ ಅಂಗಡಿ ಕುಟುಂಬಕ್ಕೆ ಬೆಂಬಲ ನೀಡುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದರು.

ಇದನ್ನೂ ಓದಿ:ರೈತ ವಿರೋಧಿ ಕಾಯ್ದೆ ಜಾರಿಯಿಂದ ಸಂಕಷ್ಟ

ಬೆಳಗಾವಿ ಗಡಿ ವಿವಾದಕ್ಕೆ ಸಂಬಂ ಧಿಸಿದಂತೆ ಪ್ರತಿಕ್ರಿಯಿಸಿದ ಹುಕ್ಕೇರಿ, ಗಡಿ ವಿಚಾರ ಮುಗಿದ ಅಧ್ಯಾಯ. ಪದೇ ಪದೇ ಅದನ್ನು ಪ್ರಸ್ತಾಪಿಸುವಅವಶ್ಯಕತೆ ಇಲ್ಲ. ಈಗಾಗಲೇ ಬೆಳಗಾವಿಯಲ್ಲಿ  ಸುವರ್ಣಸೌಧ ನಿರ್ಮಿಸಿ ಅಧಿ ವೇಶಗಳನ್ನು ನಡೆಸಲಾಗಿದೆ. ಅಲ್ಲದೇ ವೈದ್ಯಕೀಯ ಕಾಲೇಜು ತೆರೆಯಲಾಗಿದ್ದು, ಮಹಾರಾಷ್ಟ್ರ ನಾಯಕರ ಹೇಳಿಕೆಗೆ ಮಹತ್ವ ನೀಡಬೇಕಾದ ಅಗತ್ಯವಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next