Advertisement

ರೈತರ ಸಾಲ ಮನ್ನಾಕ್ಕೆ ನಿರ್ಧಾರ: ಸಚಿವ ರೇವಣ್ಣ

06:40 AM Jul 02, 2018 | Team Udayavani |

ಚಿಕ್ಕಮಗಳೂರು: ರೈತರ ಸಾಲ ಮನ್ನಾ ಮಾಡಬೇಕು ಎಂಬ ನಿರ್ಧಾರವನ್ನು ಈಗಾಗಲೇ ತೆಗೆದುಕೊಳ್ಳಲಾಗಿದೆ. ಇನ್ನು 5 ದಿನದಲ್ಲಿ ರಾಜ್ಯದ ಜನತೆಗೆ ಸಿಹಿ ಸುದ್ದಿ ಸಿಗಲಿದೆ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ತಿಳಿಸಿದ್ದಾರೆ.

Advertisement

ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿ, ಬಜೆಟ್‌ ಬಗ್ಗೆ ಗೊಂದಲ ಬೇಡ. ಮಾಜಿ ಮುಖ್ಯಮಂತ್ರಿ
ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ ಜೊತೆಗೆ ಜೆಡಿಎಸ್‌ನ ಕೆಲವು ಅಂಶಗಳನ್ನು ಸೇರಿಸಿ ಮಂಡಿಸಲಾಗುವುದು. ರೈತರ ಸಾಲ ಮನ್ನಾ ಮಾಡಬೇಕು ಎಂಬ ನಿರ್ಧಾರವನ್ನು ಈಗಾಗಲೇ ತೆಗೆದುಕೊಳ್ಳಲಾಗಿದೆ. ಅದನ್ನು ಯಾವ ರೀತಿಯಲ್ಲಿ ವರ್ಗೀಕರಿಸಿ ಮಾಡುತ್ತಾರೆ ಎಂಬುದನ್ನು ಕಾದು ನೋಡಿ. ಇನ್ನು 5 ದಿನದಲ್ಲಿ ರಾಜ್ಯದ ಜನತೆಗೆ ಸಿಹಿ ಸುದ್ದಿ ಸಿಗಲಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next