Advertisement

ನಾಳೆಯಿಂದ ಉಪವಾಸ ಸತ್ಯಾಗ್ರಹಕ್ಕೆ ನಿರ್ಧಾರ

01:00 PM May 31, 2022 | Team Udayavani |

ಆಳಂದ: ಕೆಲವು ಅಧಿಕಾರಿಗಳ ವಿರುದ್ಧ ಹಾಗೂ ಮೂಲ ಸೌಲಭ್ಯದಂತ ಹಲವು ಬೇಡಿಕೆಗೆ ಒತ್ತಾಯಿಸಿ ಬೆಳಮಗಿ ಗ್ರಾಪಂ ಮುಂದೆ ಸದಸ್ಯೆ ಪಾರ್ವತಿ ಅಂಬರಾಯ ಅವರ ಕೈಗೊಂಡ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಸೋಮವಾರ 33ನೇ ದಿನಕ್ಕೆ ತಲುಪಿದ್ದು, ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಜೂ.1ರಿಂದ ಉಪವಾಸ ಸತ್ಯಾಗ್ರಹ ನಡೆಸಲು ಅವರು ತೀರ್ಮಾನಿಸಿದ್ದಾರೆ.

Advertisement

ಈ ಕುರಿತು ಹೇಳಿಕೆ ನೀಡಿರುವ ಅವರು, ಸಿಡಿಪಿಒ ಅಮಾನತುಗೊಳ್ಳಿಸಬೇಕು ಹಾಗೂ ದಲಿತ ಬಡಾವಣೆಯಲ್ಲಿ ಕೆಟ್ಟುನಿಂತ ಶುದ್ಧ ನೀರಿನ ಘಟಕ ದುರಸ್ತಿಗೊಳಿಸಿ ನೀರು ಒದಗಿಸಬೇಕು ಎಂಬ ಹಲವು ಬೇಡಿಕೆಗೆ ಒತ್ತಾಯಿಸಿ ಕಳೆದ 33 ದಿನಗಳಿಂದಲೂ ಧರಣಿ ನಡೆಸಲಾಗಿದ್ದು, ಜೂ.1ರಿಂದ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುತ್ತಿದೆ ಎಂದು ಪಾರ್ವತಿ ಅವರು ಹೇಳಿದ್ದಾರೆ.

ಈ ಬೇಡಿಕೆಗೆ ಸಂಬಂಧಿಸಿದಂತೆ ರಾಜ್ಯದ ಲೋಕಾಯುಕ್ತರಿಗೆ ಮತ್ತು ಜಿಲ್ಲಾಧಿಕಾರಿ ಗಳ ನಡೆ ಹಳ್ಳಿಕಡೆ ಕಾರ್ಯಕ್ರಮದಲ್ಲಿ ಜಿಡಗಾದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಅಲ್ಲದೆ, ಈ ಹಿಂದೆಯೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಈ ಕುರಿತು ಜಿಪಂ ಸಿಇಒಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಆದರೆ ಇದುವರೆಗೂ ಸ್ಪಂದನೆಯಾಗಿಲ್ಲ ಎಂದು ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next