Advertisement

ಕರ್ನಾಟಕದಲ್ಲೂ ಎನ್ ಆರ್ ಸಿ ಅನುಷ್ಠಾನದ ಬಗ್ಗೆ ತೀರ್ಮಾನ: ಸಚಿವ ಬೊಮ್ಮಾಯಿ

09:46 AM Oct 03, 2019 | Sriram |

ಹಾವೇರಿ: ಭದ್ರತೆ ದೃಷ್ಟಿಯಿಂದ ರಾಜ್ಯದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ ಕಾನೂನು ಅನುಷ್ಠಾನಗೊಳಿಸುವ ಬಗ್ಗೆ ಒಂದು ವಾರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಅವರು ಬುಧವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಎನ್‌ಆರ್‌ಸಿ ಕಾನೂನನ್ನು ದೇಶದ ಕೆಲವು ರಾಜ್ಯಗಳು ಒಪ್ಪಿವೆ. ಈ ಕಾನೂನು ಬಗ್ಗೆ ಹೆಚ್ಚಿನ ಅಧ್ಯಯನ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಈ ವಾರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಜಾತಿ ಸಮೀಕ್ಷೆ ವರದಿಯನ್ನು ನಾವು ಕೈಬಿಟ್ಟಿಲ್ಲ. ಅದರ ಸಾಧಕ- ಬಾಧಕಗಳನ್ನು ಕೂಲಂಕಶವಾಗಿ ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next