Advertisement

ಪಿಒಕೆ ಕುರಿತು 1971ರಲ್ಲೇ ನಿರ್ಧಾರ ತೆಗೆದುಕೊಳ್ಳಬೇಕಿತ್ತು: ರಾಜನಾಥ್ ಸಿಂಗ್

06:22 PM Sep 26, 2022 | Team Udayavani |

ಹಮೀರ್‌ಪುರ : 1971ರಲ್ಲಿ ಭಾರತ ಮತ್ತು ಪಾಕಿಸ್ಥಾನ ನಡುವಿನ ಯುದ್ಧದ ವೇಳೆ ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಕುರಿತು ನಿರ್ಧಾರ ತೆಗೆದುಕೊಳ್ಳಬೇಕಿತ್ತು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ ಹೇಳಿದ್ದಾರೆ.

Advertisement

ಇದನ್ನೂ ಓದಿ : ಹಲವಾರು ನಾಯಕರು ಸಂಪರ್ಕದಲ್ಲಿದ್ದಾರೆ : ಮಹಾರಾಷ್ಟ್ರ ಸಿಎಂ ಶಿಂಧೆ

ಹಿಮಾಚಲ ಪ್ರದೇಶದ ಹಮೀರ್‌ಪುರ ಜಿಲ್ಲೆಯ ನಾದೌನ್‌ನಲ್ಲಿ ಹುತಾತ್ಮ ಯೋಧರ ಕುಟುಂಬಗಳಿಗೆ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ರಕ್ಷಣಾ ಸಚಿವರು,”ನಾವು ಇತ್ತೀಚೆಗೆ 1971 ರ ಯುದ್ಧದ ವಿಜಯದ ಸುವರ್ಣ ಮಹೋತ್ಸವವನ್ನು ಗುರುತಿಸಿದ್ದೇವೆ. ಆಸ್ತಿ ಅಥವಾ ಅಧಿಕಾರದ ಬದಲಿಗೆ ಮಾನವೀಯತೆಗಾಗಿ ಹೋರಾಡಿರುವುದಕ್ಕೆ 1971 ರ ಯುದ್ಧವನ್ನು ಇತಿಹಾಸದಲ್ಲಿ ನೆನಪಿಸಿಕೊಳ್ಳಲಾಗುತ್ತಿದೆ.ಒಂದೇ ವಿಷಾದವೆಂದರೆ ಆ ಸಮಯದಲ್ಲಿಯೇ ಪಿಒಕೆ ಕುರಿತು ನಿರ್ಧಾರ ತೆಗೆದುಕೊಳ್ಳಬೇಕಿತ್ತು” ಎಂದರು.

1971 ಭಾರತ ಮತ್ತು ಪಾಕಿಸ್ಥಾನದ ನಡುವಿನ ಮಿಲಿಟರಿ ಮುಖಾಮುಖಿಯಾಗಿದ್ದು, ಪೂರ್ವ ಪಾಕಿಸ್ಥಾನ (ಬಾಂಗ್ಲಾದೇಶ) ವಿಮೋಚನಾ ಯುದ್ಧದ ಸಮಯದಲ್ಲಿ 3 ಡಿಸೆಂಬರ್ 1971 ರಿಂದ 16 ಡಿಸೆಂಬರ್ 1971 ರಂದು ಢಾಕಾದಲ್ಲಿ ಪಾಕಿಸ್ಥಾನ ಶರಣಾಗುವವರೆಗೆ ನಡೆದಿತ್ತು. ಆಗ ಇಂದಿರಾ ಗಾಂಧಿ ಅವರು ದೇಶದ ಪ್ರಧಾನಿಯಾಗಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next