Advertisement

ಉ.ಪ್ರ. ಮುಖ್ಯಮಂತ್ರಿ ನಿರ್ಧಾರ ಇಂದು; ವಾರಾಣಸಿ ದೇವಳಗಳಿಗೆ ಸಿನ್ಹಾ

11:50 AM Mar 18, 2017 | udayavani editorial |

ಲಕ್ನೋ : ಉತ್ತರ ಪ್ರದೇಶ ವಿಧಾನಸಭೆಗೆ ನೂತನವಾಗಿ ಚುನಾಯಿತರಾಗಿರುವ ಬಿಜೆಪಿ ಶಾಸಕರು ಇಂದು ಶನಿವಾರ ತಮ್ಮ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಭೆ ಸೇರಲಿದ್ದಾರೆ. ಭಾರೀ ಕುತೂಹಲ ಕೆರಳಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಪಟ್ಟಕ್ಕೆ ಈಗ ಕೇಂದ್ರ ಸಚಿವ ಮನೋಜ್‌ ಸಿನ್ಹಾ ಅವರ ಹೆಸರು ಬಲವಾಗಿ ಕೇಳಿ ಬರುತ್ತಿದ್ದು ಅವರೇ ಈಗ ಸ್ಪರ್ಧೆಯ ಮುಂಚೂಣಿಯಲ್ಲಿದ್ದಾರೆ.

Advertisement

ಕೇಂದ್ರ ಸಹಾಯಕ ರೈಲ್ವೆ ಹಾಗೂ ಸಂಪರ್ಕ ಸಚಿವ ಮನೋಜ್‌ ಸಿನ್ಹಾ ಅವರಿಂದು ಬೆಳಗ್ಗೆ ವಾರಾಣಸಿಯಲ್ಲಿನ ಹಲವಾರು ದೇವಾಲಯಗಳನ್ನು ಸಂದರ್ಶಿಸಿದ್ದಾರೆ. 

ಉತ್ತರ ಪ್ರದೇಶ ಮುಖ್ಯಮಂತ್ರಿ ಪದಕ್ಕೆ ಬಿಜೆಪಿಯು ಈಗಿನ್ನೂ ಯಾರ ಹೆಸರನ್ನೂ ಪ್ರಕಟಿಸಿಲ್ಲವಾದರೂ ರಾಜ್ಯಪಾಲ ರಾಮ ನಾಯಕ್‌ ಅವರು ನೂತನ ಮುಖ್ಯಮಂತ್ರಿ ಮತ್ತು ಸಂಪುಟ ಸಹೋದ್ಯೋಗಿಗಳು ಮಾರ್ಚ್‌ 19ರ ಭಾನುವಾರ ಸಂಜೆ 5.00 ಗಂಟೆಗೆ ಕಾನ್ಶಿರಾಮ್‌ ಸ್ಮತಿ ಉಪವನದಲ್ಲಿ ಪ್ರಮಾಣ ವಚನ ಸ್ವೀಕರಿಸುವರೆಂದು ಎಂದು ಈಗಾಗಲೇ ಪ್ರಕಟಿಸಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ಪಾಲ್ಗೊಳ್ಳಲಿರುವುದರಿಂದ ಇದೊಂದು ಭವ್ಯ ಸಮಾರಂಭವಾಗಲಿದೆ ಎನ್ನಲಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next