Advertisement

ಕರ್ತವ್ಯದಲ್ಲಿ ಮುಂದುವರಿಯಲು ನಿರ್ಧಾರ: ಮೊಹಮದ್‌ ಮೌಸಿನ್‌

11:14 PM Apr 26, 2019 | Team Udayavani |

ಬೆಂಗಳೂರು: ಪ್ರಧಾನ ಮಂತ್ರಿಯ ಎಸ್‌ಪಿಜಿ ಪಡೆ ತಪಾಸಣೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದಿಂದ ಅಮಾನತುಗೊಳಗಾಗಿದ್ದ ರಾಜ್ಯ ಹಿಂದುಳಿದ ವರ್ಗಗಳ ಇಲಾಖೆ ಕಾರ್ಯದರ್ಶಿ ಮೊಹಮದ್‌ ಮೌಸಿನ್‌ ಕೇಂದ್ರೀಯ ಆಡಳಿತ ಮಂಡಳಿ ಆದೇಶದ ಹಿನ್ನೆಲೆಯಲ್ಲಿ ಇಲಾಖೆಯ ಕಾರ್ಯದರ್ಶಿಯಾಗಿ ಮುಂದುವರಿಯುವುದಾಗಿ ತಿಳಿಸಿದ್ದಾರೆ.

Advertisement

ಈ ಕುರಿತು ಮಾಧ್ಯಮಗಳಿಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಚುನಾವಣಾ ಆಯೋಗದ ಆದೇಶದ ಮೇರೆಗೆ ಒರಿಸ್ಸಾದ ಸಂಬಲ್‌ಪುರ್‌ ಲೋಕಸಭಾ ಕ್ಷೇತ್ರದಲ್ಲಿ ಜನರಲ್‌ ಅಬರ್‌ವರ್‌ ಆಗಿ ಕೆಲಸ ಮಾಡುವ ಸಂದರ್ಭದಲ್ಲಿ ಪ್ರಧಾನ ಮಂತ್ರಿಯ ಭದ್ರತೆಗೆ ನಿಯೋಜನೆಗೊಂಡಿರುವ ಎಸ್‌ಪಿಜಿ ಪಡೆಯ ತಪಾಸಣೆ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಮೊಹಮದ್‌ ಮೌಸಿನ್‌ ಅವರನ್ನು ಏಪ್ರಿಲ್‌ 16 ರಂದು ಚುನಾವಣಾ ಕಾರ್ಯದಿಂದ ಅಮಾನತು ಮಾಡಿತ್ತು.

ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಕೇಂದ್ರೀಯ ಆಡಳಿತ ಮಂಡಳಿಗೆ ಅರ್ಜಿ ಸಲ್ಲಿಸಿದ್ದರು. ಕೇಂದ್ರೀಯ ಆಡಳಿತ ಮಂಡಳಿ ಏ.25 ರಂದು ಚುನಾವಣಾ ಆಯೋಗದ ಅಮಾನತು ಆದೇಶ ರದ್ದು ಪಡಿಸಿ, ಸರ್ಕಾರದ ಇಲಾಖೆಯಲ್ಲಿ ಹಿಂದೆ ಹೊಂದಿದ್ದ ಹುದ್ದೆಯಲ್ಲಿ ಮುಂದುವರೆಯಲು ಆದೇಶಿಸಿತ್ತು.

ಆಡಳಿತ ಮಂಡಳಿಯ ಆದೇಶದಂತೆ ಹಿಂದುಳಿದ ವರ್ಗಗಳ ಇಲಾಖೆಯ ಕಾರ್ಯದರ್ಶಿ ಹುದ್ದೆಯಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದಾರೆ. ಅಲ್ಲದೇ ಚುನಾವಣಾ ಆಯೋಗ ತಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಮಾಡಿರುವ ಶಿಫಾರಸನ್ನೂ ಕಾನೂನು ರೀತಿ ಎದುರಿಸುವುದಾಗಿ ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next