Advertisement

ಕುರುಬ ಸಮುದಾಯ ಎಸ್ಟಿಗೆ ಸೇರಿಸಲು ಹೋರಾಟಕ್ಕೆ ನಿರ್ಧಾರ

11:19 PM Mar 20, 2020 | Lakshmi GovindaRaj |

ಬೆಂಗಳೂರು: ಕುರುಬ ಸಮುದಾಯವನ್ನು ಎಸ್ಟಿ ಪ್ರವರ್ಗಕ್ಕೆ ಸೇರಿಸಲು ಸಂಘಟಿತರಾಗಿ ಹೋರಾಡಲು ರಾಜ್ಯದ ಕುರುಬ ಸಮುದಾಯದ ನಾಯಕರು ನಿರ್ಧರಿಸಿದ್ದಾರೆ. ಸಚಿವ ಕೆ.ಎಸ್‌.ಈಶ್ವರಪ್ಪ ನೇತೃತ್ವದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮುಂದಿನ ಹೋರಾಟದ ರೂಪು ರೇಷೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಸಭೆಯಲ್ಲಿ ಮಾತನಾಡಿದ ಕೆ.ಎಸ್‌.ಈಶ್ವರಪ್ಪ, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಹಲವು ಕಡೆ ಈಗಾಗಲೇ ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಲಾಗಿದೆ.

Advertisement

ನಮ್ಮ ರಾಜ್ಯದಲ್ಲಿ 1970 ರಿಂದಲೂ ಹೋರಾಟ ನಡೆಯುತ್ತಿದೆ. ಕುರುಬ ಸಮಾಜವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸುವ ಹೋರಾಟದಲ್ಲಿ ನಾನು ಮುಂಚೂಣಿಯಲ್ಲಿರುತ್ತೇನೆ. ನಮ್ಮ ಹೋರಾಟದ ಬಗ್ಗೆ ಹಲವು ನಾಯಕರು ಸಂಶಯ ವ್ಯಕ್ತಪಡಿಸಿರಬಹುದು. ಆದರೆ, ನಾವೆಲ್ಲರೂ ಒಗ್ಗಟ್ಟಾಗಿ ಇರುತ್ತೇವೆ ಎಂದು ಹೇಳಿದರು. ಮಾಜಿ ಸಚಿವ ಬಂಡೆಪ್ಪ ಕಾಶಂಪೂರ ಮಾತನಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next