Advertisement

ಆಕ್ಷೇಪಣೆ ಸಲ್ಲಿಸಲು ತೀರ್ಮಾನ

05:57 PM Apr 20, 2022 | Team Udayavani |

ಬೀದರ: ನಗರದ ಬಿ.ಎಸ್‌. ಯಡಿಯೂರಪ್ಪ ಬಡಾವಣೆಯಲ್ಲಿ ನಿವೇಶನ ಪಡೆಯಲು ಅರ್ಜಿ ಸಲ್ಲಿಸಿರುವ ನಿವೇಶನದಾರರಿಗೆ ಯಾದಿ ಪ್ರಕಟಿಸಲು ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನಿಸಲಾಯಿತು.

Advertisement

ಇಲ್ಲಿನ ಬುಡಾ ಕಚೇರಿಯಲ್ಲಿ ಮಂಗಳವಾರ ಅಧ್ಯಕ್ಷ ಬಾಬು ವಾಲಿ ನೇತೃತ್ವದಲ್ಲಿ ಸಭೆ ನಡೆಯಿತು. ಯಾದಿಯಲ್ಲಿ ಯಾವುದೇ ಆಕ್ಷೇಪಣೆ ಇದಲ್ಲಿ ಕಚೇರಿ ಸಮಯದಲ್ಲಿ ಬೀದರ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಗೆ ಬಂದು ಆಕ್ಷೇಪ ಸಲ್ಲಿಸಬಹುದು ಎಂದು ಮನವಿ ಮಾಡಲಾಯಿತು.

ಸಭೆಯಲ್ಲಿ ಶಾಸಕ ರಹೀಮ್‌ ಖಾನ್‌, ವಿಧಾನ ಪರಿಷತ್‌ ಸದಸ್ಯರಾದ ರಘುನಾಥರಾವ್‌ ಮಲ್ಕಾಪುರೆ, ಅರವಿಂದ ಅರಳಿ, ಬಿಡಿಎ ಆಯುಕ್ತ ಅಭಯ ಕುಮಾರ, ಡಿಎಸ್‌ಪಿ ಸತೀಶ ಕುಮಾರ, ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ರಮೇಶ ಪಾಟೀಲ, ನಗರ ಯೋಜನಾ ವ್ಯವಸ್ಥಾಪಕ ವಿಷ್ಣು ಭಂಡಾರಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

ಸಭೆ ಬಳಿಕ ಅಧ್ಯಕ್ಷ ಬಾಬು ವಾಲಿ ನೇತೃತ್ವದಲ್ಲಿ ಶಾಸಕರು ಮತ್ತು ಅಧಿಕಾರಿಗಳು ಯಡಿಯೂರಪ್ಪ ಬಡಾವಣೆಗೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next