Advertisement

ಜೆಡಿಎಸ್‌ ಶಾಸಕರ ತಿಂಗಳ ವೇತನ ನೀಡಲು ತೀರ್ಮಾನ

01:01 AM Aug 10, 2019 | Team Udayavani |

ಬೆಂಗಳೂರು: ರಾಜ್ಯದಲ್ಲಿ ಪ್ರವಾಹ ಪೀಡಿತರ ನೆರವಿಗೆ ಜೆಡಿಎಸ್‌ನ ಎಲ್ಲ ಶಾಸಕರು, ವಿಧಾನಪರಿಷತ್‌ ಸದಸ್ಯರು ತಮ್ಮ ಒಂದು ತಿಂಗಳ ವೇತನ ನೀಡಲು ತೀರ್ಮಾನಿಸಿದ್ದಾರೆ.

Advertisement

ಸಂಕಷ್ಟದಲ್ಲಿರುವ ಜನರಿಗೆ ಸ್ಪಂದಿಸುವ ಸಲುವಾಗಿ ನಮ್ಮ ಪಕ್ಷದ ಎಲ್ಲ ಶಾಸಕರು ಒಂದು ತಿಂಗಳ ವೇತನ ನೀಡಲು ನಿರ್ಧರಿಸಿದ್ದೇವೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಜೆಡಿಎಸ್‌ ಜಿಲ್ಲಾ ಹಾಗೂ ತಾಲೂಕು ಘಟಕಗಳಿಗೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಜನರ ಸಮಸ್ಯೆಗೆ ಸ್ಪಂದಿಸಿ ತಮ್ಮ ಕೈಲಾದ ಸಹಾಯ ಮಾಡಲು ಸೂಚನೆ ನೀಡಲಾಗಿದೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next