Advertisement

ವರ್ಷವಿಡೀ ಕಾರ್ಯಕ್ರಮ ನಡೆಸಲು ನಿರ್ಧಾರ

06:15 AM Aug 12, 2017 | Team Udayavani |

ಮಡಿಕೇರಿ: ಕೊಡವರ ಆದಿ ಕವಿ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿಯ 150ನೇ ಜನ್ಮೋತ್ಸವವನ್ನು ವರ್ಷವಿಡೀ ಆಚರಿಸಲು ಅಖೀಲ ಕೊಡವ ಸಮಾಜ ತೀರ್ಮಾನಿಸಿದೆ. 

Advertisement

ಅಖೀಲ ಕೊಡವ ಸಮಾಜದ ಅಧ್ಯಕ್ಷ ಮಾತಂಡ ಮೊಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ವಿರಾಜಪೇಟೆಯ ಅಖೀಲ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ವಿವಿಧ ಕೊಡವ ಸಮಾಜದ ಪ್ರತಿನಿಧಿಗಳು ಹಾಗೂ ಪ್ರಮುಖರ ಸಭೆಯಲ್ಲಿ ವರ್ಷವಿಡೀ ಅಪ್ಪಚ್ಚ ಕವಿಯನ್ನು ನೆನಪು ಮಾಡಿಕೊಳ್ಳುವಂತಹ ಕಾರ್ಯಕ್ರಮವನ್ನು ನಡೆಸಲು ನಿರ್ಧಾರ ತೆಗೆದುಕೊಳ್ಳಲಾಯಿತು.

ಸೆಪ್ಟಂಬರ್‌ ತಿಂಗಳಿನಲ್ಲಿ ಅಪ್ಪಚ್ಚ ಕವಿಯ ಜನ್ಮೋತ್ಸವವನ್ನು ಉದ್ಘಾಟಿಸಲಾಗುವುದು. ಅನಂತರ ಪ್ರತಿ ತಿಂಗಳು ಒಂದೊಂದು ಪ್ರದೇಶದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಈ ಕುರಿತು ತಾತ್ಕಾಲಿಕವಾಗಿ “”ಅಪ್ಪಚ್ಚ ಕವಿ 150ನೇ ಜನ್ಮೋತ್ಸವ ಸಂಚಾಲಕ ಸಮಿತಿಯೊಂದನ್ನು ರಚಿಸಲಾಯಿತು. ಆ.22 ರಂದು ವಿರಾಜಪೇಟೆಯಲ್ಲಿ ಮತ್ತೂಮ್ಮೆ ಎಲ್ಲಾ ಕೊಡವ ಸಮಾಜ, ಕೊಡವ ಸಮಾಜಗಳ ಒಕ್ಕೂಟ ಪ್ರತಿನಿಧಿಗಳ ಸಭೆ ನಡೆಸಲಾಗುವುದು. ಅಲ್ಲಿ ಕಾರ್ಯಕ್ರಮಗಳ ವಿವರವನ್ನು ಚರ್ಚೆಸಿ ಅಂತಿಮಗೊಳಿಸಲಾಗುವುದು ಎಂದು ಅಖೀಲ ಕೊಡವ ಸಮಾಜದ ಅಧ್ಯಕ್ಷ ಮಾತಂಡ ಮೊಣ್ಣಪ್ಪ ತಿಳಿಸಿದ್ದಾರೆ. ಸಭೆಯಲ್ಲಿ ಅಖೀಲ ಕೊಡವ ಸಮಾಜದ ಖಜಾಂಚಿ ಮಂಡೇಪಂಡ ಸುಗುಣ, ಕಾರ್ಯದರ್ಶಿ ಅಮ್ಮಣಿಚಂಡ ರಾಜಾ ನಂಜಪ್ಪ, ಕೊಡವ ಸಮಾಜದ ಪ್ರತಿನಿಗಳು ಹಾಗೂ ಸಾಹಿತಿಗಳು ಉಪಸ್ಥಿತರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next