Advertisement

ಟಿಕೆಟ್‌ ಹಂಚಿಕೆ ಬಳಿಕ ಅಭ್ಯರ್ಥಿಗಳ ಘೋಷಣೆ

01:42 AM Feb 24, 2019 | |

ರಾಯಚೂರು: ಟಿಕೆಟ್‌ ಹಂಚಿಕೆ ಬಳಿಕವೇ ಅಭ್ಯರ್ಥಿಗಳ ಘೋಷಣೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್‌ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪರಿವರ್ತನೆ ಯಾತ್ರೆ ಸಮಾವೇಶ ಆರಂಭಿಸಲಾಗಿದೆ.

Advertisement

ಮೈತ್ರಿ ಸರ್ಕಾರದಿಂದ ಮೊದಲ ಬಾರಿಗೆ ಲೋಕಸಭೆ ಚುನಾವಣೆ ಎದುರಿಸುತ್ತಿದ್ದೇವೆ. ಟಿಕೆಟ್‌ ಹಂಚಿಕೆ ಅಂತಿಮಗೊಳಿಸಿದ ಬಳಿಕವೇ ಅಭ್ಯರ್ಥಿಗಳ ಘೋಷಣೆ ಮಾಡಲಾಗುವುದು. ಮೈತ್ರಿಯಲ್ಲಿ ನಮ್ಮದು ಜವಾಬ್ದಾರಿಯುತ ನಡತೆ. ಅಮಿತ್‌ ಶಾ ಕರ್ನಾಟಕಕ್ಕೆ ಬಂದು ಆಪರೇಷನ್‌ ಕಮಲ ಬೇಡ ಲೋಕಸಭೆ ಚುನಾವಣೆ ಮುಗಿದ ಮೇಲೆ ನೋಡೋಣ ಎಂದಿದ್ದಾರೆ. ಅಂಥವರಿಗೆ ಮಹಾಘಟ ಬಂಧನ್‌ ಬಗ್ಗೆ ಟೀಕಿಸುವ ಯಾವ ನೈತಿಕತೆಯೂ ಇಲ್ಲ. ಮೈತ್ರಿಬಗ್ಗೆ ವ್ಯಂಗ್ಯವಾಗಿ ಮಾತನಾಡುವವರು ತಮಿಳುನಾಡು, ಮಹಾರಾಷ್ಟ್ರ ಸೇರಿ ಇತರ ರಾಜ್ಯಗಳಲ್ಲಿ ಏಕೆ ಮೈತ್ರಿ ಮಾಡಿಕೊಂಡಿದ್ದಾರೆ. ಬಿಜೆಪಿ ಕೇವಲ ನೀತಿಗೆಟ್ಟ ರಾಜಕಾರಣ ಮಾಡುತ್ತಿದೆ. ಸರ್ಜಿಕಲ್‌ ಸ್ಟ್ರೆಕ್‌ನಲ್ಲಿ ಸಫಲಾರಾಗಿದ್ದೇವೆ ಎಂದು ಜಂಬ ಕೊಚ್ಚಿಕೊಳ್ಳುವವರು, ಪುಲ್ವಾಮಾ ದುರ್ಘ‌ಟನೆಯ ವೈಫಲ್ಯದ ಹೊಣೆಯನ್ನೂ ಹೊತ್ತುಕೊಳ್ಳಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next