Advertisement

ಮೂಲ್ಕಿ  ಸಹಿತ ಐದು ಹೊಸ ತಾಲೂಕುಗಳ ಘೋಷಣೆ

12:30 AM Feb 28, 2019 | |

ಬೆಂಗಳೂರು: ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ರಾಜ್ಯ ಸರಕಾರ ಮತ್ತೆ ಐದು ಹೊಸ ತಾಲೂಕುಗಳನ್ನು ಘೋಷಣೆ ಮಾಡಿದೆ. ಸೋಮವಾರ ಮುಖ್ಯಮಂತ್ರಿ ಕುಮಾರ ಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ, ಕೊಡಗು ಜಿಲ್ಲೆಯ ಪೊನ್ನಂಪೇಟೆ, ಕುಶಾಲನಗರ, ವಿಜಯಪುರ ಜಿಲ್ಲೆಯ ಅಲಮೇಲ, ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕುಗಳ ಘೋಷಣೆ ಮಾಡ ಲಾಗಿದೆ.

Advertisement

ಮುಖ್ಯಮಂತ್ರಿ ಕುಮಾರಸ್ವಾಮಿ 2019-20ನೇ ಸಾಲಿನಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ ರಾಮನಗರ ಜಿಲ್ಲೆಯ ಹಾರೋಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು, ಬಾಗಲಕೋಟೆ ಜಿಲ್ಲೆಯ ತೇರದಾಳ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕಳಸವನ್ನು ತಾಲೂಕುಗಳನ್ನಾಗಿ ಘೋಷಣೆ ಮಾಡಿದ್ದರು. ಸೋಮವಾರ ನಡೆದ ಸಂಪುಟದಲ್ಲಿ ಹೊಸದಾಗಿ ಐದು ತಾಲೂಕುಗಳನ್ನು ಘೋಷಣೆ ಮಾಡುವ ಮೂಲಕ ಸಮ್ಮಿಶ್ರ ಸರಕಾರ 9 ಹೊಸ ತಾಲೂಕುಗಳ ರಚನೆಗೆ ತೀರ್ಮಾನಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next