Advertisement

ಸದ್ಯದಲ್ಲೇ ಮೈತ್ರಿ ಘೋಷಣೆ

12:30 AM Feb 17, 2019 | Team Udayavani |

ಚೆನ್ನೈ: ತಮಿಳುನಾಡಿನಲ್ಲಿ ಎಐಎಡಿಎಂಕೆ ಹಾಗೂ ಇತರ ಕೆಲವು ಪ್ರಾದೇಶಿಕ ಪಕ್ಷಗಳೊಂದಿಗೆ ಬಿಜೆಪಿ ಮೈತ್ರಿ ಮಾತುಕತೆ ನಡೆದಿದ್ದು, ಶೀಘ್ರದಲ್ಲೇ ಅಧಿಕೃತ ಘೋಷಣೆ ನಡೆಯಲಿದೆ ಎನ್ನಲಾಗಿದೆ. ಶುಕ್ರವಾರ ತಡರಾತ್ರಿ ಚೆನ್ನೈಗೆ ಆಗಮಿಸಿದ ಕೇಂದ್ರ ಸಚಿವ ಪಿಯೂಷ್‌ ಗೋಯೆಲ್‌ ಅವರು, ಸಿಎಂ ಇ.ಕೆ.ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ ಪನ್ನೀರಸೆಲ್ವಂ ಜೊತೆ ಮಾತುಕತೆ ನಡೆಸಿದ್ದಾರೆ. ಎಐಎಡಿಎಂಕೆ ಹಾಗೂ ಬಿಜೆಪಿ ನಾಯಕರ ಸಮ್ಮುಖದಲ್ಲಿ  ಮುಂದಿನ ಮಂಗಳವಾರ ಘೋಷಿಸುವ ಸಾಧ್ಯತೆಯಿದೆ. ಐದು ಸುತ್ತಿನ ಮಾತುಕತೆ ನಂತರವೂ ಕೆಲವು ಸವಾಲುಗಳಿದ್ದವು, ಪಿಯೂಷ್‌ ಗೋಯೆಲ್‌ ಚೆನ್ನೈಗೆ ಆಗಮಿಸಿದಾಗ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ.ಆದರೆ ಸೀಟು ಹಂಚಿಕೆ ಮಾತುಕತೆ ಇನ್ನೂ ಮುಂದುವರಿದಿದೆ. ಮೂಲಗಳ ಪ್ರಕಾರ 8 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಬಿಜೆಪಿ ಬಯಸಿದೆ. ಪಿಎಂಕೆ ಕೂಡ ಈ ಮೈತ್ರಿಯಲ್ಲಿ ಸೇರುತ್ತದೆ ಎಂದು ಮೂಲಗಳು ತಿಳಿಸಿವೆ. ಇದರೊಂದಿಗೆ ವಿಜಯಕಾಂತ್‌ ನೇತೃತ್ವದ ಡಿಎಂಡಿಕೆ, ಜಿ ಕೆ ವಾಸನ್‌ ನೇತೃತ್ವದ ತಮಿಳ್‌ ಮಾನಿಲ ಕಾಂಗ್ರೆಸ್‌ ಹಾಗೂ ಇತರ ಪಕ್ಷಗಳು ಈ ಮೈತ್ರಿಯಲ್ಲಿ ಸೇರಲಿವೆ ಎನ್ನಲಾಗಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next