Advertisement

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

12:32 PM Apr 27, 2024 | Team Udayavani |

ಹೊಸದಿಲ್ಲಿ: ಬಿಜೆಪಿ ನಾಯಕ ಮತ್ತು ಪಶ್ಚಿಮ ಬಂಗಾಳ ವಿಧಾನಸಭೆಯ ವಿಪಕ್ಷ ನಾಯಕ ಸುವೇಂದು ಅಧಿಕಾರಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದು, ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

Advertisement

ಗಲಭೆ ನಡೆದಿದ್ದ ಸಂದೇಶ್ ಖಲಿಯಲ್ಲಿ ಸಿಬಿಐ ಅಧಿಕಾರಿಗಳು, ಶಸ್ತ್ರಾಸ್ತ್ರ, ಮದ್ದುಗುಂಡುಗಳು, ವಿದೇಶಿ ನಿರ್ಮಿತ ಪಿಸ್ತೂಲ್ ಗಳನ್ನು ವಶಪಡಿಸಿಕೊಂಡಿದೆ. ಇದರ ಬಳಿಕ ಸುವೇಂದು ಅಧಿಕಾರಿಯವರ ಈ ಹೇಳಿಕೆ ಬಂದಿದೆ.

“ಸಂದೇಶಖಾಲಿಯಲ್ಲಿ ಸಿಕ್ಕಿರುವ ಎಲ್ಲಾ ಶಸ್ತ್ರಾಸ್ತ್ರಗಳು ವಿದೇಶಿ. ಆರ್‌ಡಿಎಕ್ಸ್‌ನಂತಹ ಸ್ಫೋಟಕಗಳನ್ನು ಭಯಾನಕ ದೇಶವಿರೋಧಿ ಚಟುವಟಿಕೆಗಳಲ್ಲಿ ಬಳಸಲಾಗುತ್ತದೆ. ಈ ಎಲ್ಲಾ ಶಸ್ತ್ರಾಸ್ತ್ರಗಳನ್ನು ಅಂತಾರಾಷ್ಟ್ರೀಯ ಭಯೋತ್ಪಾದಕರು ಬಳಸುತ್ತಾರೆ. ತೃಣಮೂಲ ಕಾಂಗ್ರೆಸ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ನಾನು ಒತ್ತಾಯಿಸುತ್ತೇನೆ.” ಎಂದಿದ್ದಾರೆ.

ಈ ಘಟನೆಗೆ ಮಮತಾ ಬ್ಯಾನರ್ಜಿಯೇ ಸಂಪೂರ್ಣ ಹೊಣೆ. ಮಮತಾ ಬ್ಯಾನರ್ಜಿ ಅವರನ್ನು ಬಂಧಿಸಬೇಕು ಮತ್ತು ತೃಣಮೂಲ ಕಾಂಗ್ರೆಸನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಬೇಕು ಎಂದು ನಾನು ಒತ್ತಾಯಿಸುತ್ತೇನೆ ಎಂದು ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next