Advertisement

ಕೊರೊನಾ ಇಳಿಕೆ; ಚಟುವಟಿಕೆಗಳಿಗೆ ಮತ್ತ ಷ್ಟು ಸಡಿಲಿಕೆ

09:30 AM Oct 26, 2021 | Team Udayavani |

ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಇಳಿಕೆ ಹಿನ್ನೆಲೆಯಲ್ಲಿ ಮತ್ತುಷ್ಟು ಚಟುವಟಿಕೆಗಳಿಗೆ ಸಡಿಲಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ತಿಳಿಸಿದ್ದಾರೆ.

Advertisement

ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡದಂತೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಪರಿಪಾಲನೆ ಮಾಡುವುದರೊಂದಿಗೆ ಕೆಲವು ಚಟುವಟಿಕೆಗಳಿಗೆ ಸಡಿಲಿಕೆ ನೀಡಲಾಗಿದೆ. ಅ.17ರಂದು ತಾಂತ್ರಿಕ ಸಲಹಾ ಸಮಿತಿಯು ರಾಜ್ಯದ ಕೋವಿಡ್‌-19 ಪರಿಸ್ಥಿತಿಯನ್ನು ಪರಿಶೀಲಿಸಲಾಗಿದೆ. ಸಕ್ರಿಯ ಪ್ರಕರಣಗಳು ಸತತವಾಗಿ ಇಳಿಕೆಯಾಗುತ್ತಿರುವುದನ್ನು ಗಮನಿಸಿ ಹೆಚ್ಚಿನ ಚಟುವಟಿಕೆಗಳನ್ನು ಪುನರಾರಂಭಿಸಲು ಶಿಫಾರಸ್ಸು ಮಾಡಿದೆ ಎಂದು ಹೇಳಿದ್ದಾರೆ.

ಜಿಲ್ಲೆಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಆಗಮನದ ಅವಕಾಶ ನೀಡಲಾಗಿದೆ. ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಆರ್‌ಟಿ-ಪಿಸಿಆರ್‌ ಪರೀಕ್ಷಾ ವರದಿ ಪರಿಶೀಲನೆ ಸ್ಥಗಿತಗೊಳಿಸುವುದು. ಬದಲಾಗಿ ಪ್ರಯಾಣಿಕರು ಏರ್‌ ಸುವಿಧಾ ಪೋರ್ಟಲ್‌ನಲ್ಲಿ (ಆರ್‌ಟಿ-ಪಿಸಿಆರ್‌) ಪರೀಕ್ಷಾ ವರದಿಯನ್ನು ಕಡ್ಡಾಯವಾಗಿ ಅಪ್‌ಲೋಡ್‌ ಮಾಡಬೇಕು ಮತ್ತು ಈ ವರದಿಯನ್ನು ಪ್ರಯಾಣಿಕರು ಹೊರಡುವ ಮುಂಚಿತವಾಗಿ ಸಂಬಂಧಪಟ್ಟ ವಿಮಾನಯಾನ ಸಂಸ್ಥೆಗಳು ಪರೀಕ್ಷಿಸಿಕೊಳ್ಳುವುದು. ಸ್ವಯಂ ಚಾಲಿತ ಥರ್ಮಲ್‌ ಕ್ಯಾಮರಾಗಳ ಮೂಲಕ ಪ್ರಯಾಣಿಕರ ಮೇಲ್ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಟಾಲಿವುಡ್‌ ನಲ್ಲಿ ಶ್ರೀಲೀಲಾಗೆ ಬೇಡಿಕೆ

ಶಾಲೆಗಳ ಆರಂಭ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಿಂದ ಹೊರಡಿಸಲಾಗುವ ಪ್ರಮಾಣಿತ ಕಾರ್ಯ ವಿಧಾನಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಭೌತಿಕ ತರಗತಿಗಳಿಗೆ ಹಾಜರಾಗಲು ಪೋಷಕರ ಒಪ್ಪಿದ ಪತ್ರ ಪಡೆಯುವುದು ಕಡ್ಡಾಯಗೊಳಿಸಲಾಗಿದೆ. ಶಾಲೆಯ ಪ್ರವೇಶ ದ್ವಾರಗಳಲ್ಲಿ ಕೊರೊನಾ ಲಕ್ಷಣಗಳ ತಪಾಸಣೆ, ತರಗತಿ ಕೋಣೆಗಳ ಸಾಮರ್ಥ್ಯದ ಶೇ.50ರಷ್ಟು ಮಾತ್ರ ಭರ್ತಿ ಮಾಡಬೇಕು. ಹ್ಯಾಂಡ್‌ ಸ್ಯಾನಿಟೈಸರ್‌ಗಳನ್ನು ಒದಗಿಸುವುದು, ಪ್ರಾಯೋಗಿಕವಾಗಿ ಸಾಧ್ಯವಾಗುವಂತೆ ಕನಿಷ್ಟ ಒಂದು ಮೀಟರ್‌ ದೈಹಿಕ ಅಂತರ ಕಾಪಾಡಿಕೊಳ್ಳಬೇಕು. ಪ್ರಮುಖವಾಗಿ ಶಾಲಾ ಪ್ರವೇಶ ಮತ್ತು ನಿರ್ಗಮನದ ಸ್ಥಳಗಳಲ್ಲಿ ಜನದಟ್ಟಣೆ ಉಂಟಾಗದಂತೆ ಕ್ರಮವಹಿಸಬೇಕೆಂದು ಸೂಚಿಸಲಾಗಿದೆ.

Advertisement

ಕೆಲವು ಷರತ್ತುಗೊಳಪಟ್ಟು ಈಜುಕೊಳ ಆರಂಭಿಸಲು ಅನುಮತಿ ನೀಡಲಾಗಿದ್ದು, ಪ್ರತಿ ತಂಡದ ಶೇ.50ರಷ್ಟು ಸಾಮರ್ಥ್ಯಕ್ಕೆ ಅನುಮತಿಸಬೇಕು. ಪ್ರವೇಶ ದ್ವಾರಗಳಲ್ಲಿ ಅನುಮತಿಸಬಹುದಾದ ಈಜುಗಾರರ ಸಂಖ್ಯೆಯನ್ನು ಪ್ರದರ್ಶಿಸಬೇಕು. ಪ್ರವೇಶ ದ್ವಾರದಲ್ಲಿ ಎಲ್ಲ ರೀತಿಯ ಜ್ವರ ಮತ್ತು ಉಸಿರಾಟದ ಲಕ್ಷಣಗಳನ್ನು ಪರೀಕ್ಷಿಸಬೇಕು. ಯಾವುದೇ ರೋಗಲಕ್ಷಣಗಳು ಇಲ್ಲದವರಿಗೆ ಮತ್ತು ಎರಡು ಡೋಸ್‌ ಕೋವಿಡ್‌ 19 ಲಸಿಕೆ ಪಡೆದ ಪ್ರಮಾಣ ಪತ್ರ ಹೊಂದಿದವರಿಗೆ ಮಾತ್ರ ಅವಕಾಶ ನೀಡಬೇಕು. ಪ್ರತಿ ತಂಡದ ನಂತರ – ಈಜುಗಾರರು ಬಳಸುವ ವಿಶ್ರಾಂತಿ ಕೊಠಡಿಗಳು, ಕಾಲುದಾರಿಗಳು ಮತ್ತು ಇತರೆ ಸಾಮಾನ್ಯ ಸ್ಥಳಗಳನ್ನು ಸೋಡಿಯಂ ಹೈಪೋಕ್ಲೋರೈಟ್‌ ಮಿಶ್ರಿತ ದಾವಣನಿಂದ ಸೋಂಕು ರಹಿತಗೊಸಬೇಕು ಎಂದು ಅವರು ತಿಳಿಸಿದ್ದಾರೆ.

ಕಿರಿಯ ಪ್ರಾಥಮಿಕ ಶಾಲೆಗಳು ಆರಂಭವಾದ ಹಿನ್ನೆಲೆಯಲ್ಲಿ ಎರಡು ಡೋಸ್‌ ಕೋವಿಡ್‌ ಲಸಿಕೆ ಪಡೆದಂತಹ ಶಿಕ್ಷಕರು ಮತ್ತು ಸಿಬ್ಬಂದಿಗೆ ಮಾತ್ರ 1ರಿಂದ 5ನೇ ತರಗತಿ ಕೊಠಡಿಗಳಿಗೆ ಪ್ರವೇಶಿಸಲು ಅವಕಾಶ ಕಲ್ಪಿಸಬೇಕು. 50 ವರ್ಷಕ್ಕಿಂತ ಮೇಲ್ಪಟ್ಟ ಶಿಕ್ಷಕರು ಕಡ್ಡಾಯವಾಗಿ ಫೇಸ್‌ ಶೀಲ್ಡ್‌ ಬಳಸಬೇಕು. -ವಿ.ವಿ.ಜ್ಯೋತ್ಸ್ನಾ, ಜಿಲ್ಲಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next