Advertisement

ಹೊರರೋಗಿಗಳ ಸಂಖ್ಯೆ ಇಳಿಮುಖ

05:17 PM Mar 22, 2020 | Suhan S |

ತುಮಕೂರು: ಜಗತ್ತಿನಾದ್ಯಂತ ಮಹಾಮಾರಿ ಕೋವಿಡ್ 19 ವೈರಸ್‌ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯ ಹೊರ ರೋಗಿಗಳ ವಿಭಾಗಕ್ಕೆ ಬರುತ್ತಿರುವ ರೋಗಿಗಳ ಸಂಖ್ಯೆಯಲ್ಲಿಯೂ ಗಣನೀಯವಾಗಿ ಇಳಿಮುಖವಾಗಿದೆ.

Advertisement

ತಲ್ಲಣ ಮೂಡಿಸಿರುವ ವೈರಸ್‌ ರಾಜ್ಯದಲ್ಲೂ ಹರಡುತ್ತಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ, ಜಿಲ್ಲಾಡಳಿತ, ಆರೋಗ್ಯ ಇಲಾಖೆ ಜನ ಜಾಗೃತಿ ಮೂಡಿಸುತ್ತಿದೆ. ಈ ಹಿನ್ನೆಲೆಯಲ್ಲಿ ಸಣ್ಣಪುಟ್ಟ ಕಾಯಿಲೆ ತೋರಿಸಲು ಆಸ್ಪತ್ರೆಗಳಿಗೆ ತೆರಳುತ್ತಿದ್ದ ರೋಗಿಗಳ ಸಂಖ್ಯೆ ತಾನಾಗಿಯೇ ಕ್ಷೀಣಿಸಿದೆ. ಸದಾ ಜನದಟ್ಟಣೆ ಜಾಸ್ತಿ ಇರುವ ಕಡೆ ಈ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿರುವುದರಿಂದ ಆದಷ್ಟು ಜನಸಂಪರ್ಕ ಕಡಿಮೆ ಇರುವಂತೆ ನೋಡಿಕೊಳ್ಳಬೇಕು. ಜನಸಾಮಾನ್ಯರೂ ಜನ ಸಂದಣಿ ಇರುವಲ್ಲಿ ಹೆಚ್ಚು ಸಮಯ ಬೆರೆಯಬಾರದು ಎಂಬ ಅಂಶ ಅರಿತಿರುವುದರಿಂದ ಜಿಲ್ಲಾಸ್ಪತ್ರೆಯ ಹೊರ ರೋಗಿಗಳ ವಿಭಾಗಕ್ಕೆ ಬರುತ್ತಿರುವ ರೋಗಿಗಳ ಸಂಖ್ಯೆಯಲ್ಲಿ ಗಣ ನೀಯವಾಗಿ ಇಳಿಕೆಯಾಗಿದೆ.

ಪ್ರತಿನಿತ್ಯ ಜಿಲ್ಲಾಸ್ಪತ್ರೆ ಹೊರ ರೋಗಿಗಳ ವಿಭಾಗಕ್ಕೆ 1,500 ರೋಗಿಗಳ ಬರುತ್ತಿದ್ದರು. ಹೊರ ರೋಗಿಗಳ ವಿಭಾಗದ ನೋಂದಣಿ ಕೌಂಟರ್‌ನಲ್ಲಿ ಐದಾರು ಸಾಲಿನಲ್ಲಿ ನೂರಾರು ಜನ ನೋಂದಣಿಗೆ ನಿಲ್ಲುತ್ತಿದ್ದರು. ಆದರೆ ಕೋವಿಡ್ 19  ಹರಡುತ್ತಿರುವ ಭೀತಿ ಹೆಚ್ಚುತ್ತಿರುವುದರಿಂದ ಅವಶ್ಯ ಇರುವ ರೋಗಿಗಳಷ್ಟೇ ಆಸ್ಪತ್ರೆಗೆ ಬರುತ್ತಿದ್ದಾರೆ.

ಕೋವಿಡ್ 19  ವೈರಸ್‌ ಹರಡುವ ಭೀತಿ ಹಿನ್ನೆಲೆಯಲ್ಲಿ ಅವಶ್ಯವಿದ್ದರಷ್ಟೇ ಆಸ್ಪತ್ರೆಗೆ ಬನ್ನಿ, ಸಣ್ಣ ಪುಟ್ಟ ಕಾಯಿಲೆಗಳಿಗೆ ಬರಬೇಡಿ ಎಂದು ಆರೋಗ್ಯ ಇಲಾಖೆ ಅಪರ ಪ್ರಧಾನ ಕಾರ್ಯದರ್ಶಿಗಳು ಮನವಿ ಮಾಡಿದ್ದಾರೆ. ಜಿಲ್ಲಾ ಆಸ್ಪತ್ರೆಗೆ ಬರುತ್ತಿದ್ದ ರೋಗಿಗಳ ಸಂಖ್ಯೆಯೂ ಗಣನೀಯವಾಗಿ ಇಳಿಮುಖವಾಗಿದೆ. ಅಗತ್ಯ ಇರುವ ರೋಗಿಗಳಷ್ಟೇ ಆಸ್ಪತ್ರೆಗೆ ಬರುತ್ತಿದ್ದಾರೆ. ಡಾ.ಟಿ.ಎ.ವೀರಭದ್ರಯ್ಯ, ಜಿಲ್ಲಾ ಶಸ್ತ್ರಚಿಕಿತ್ಸಕ

Advertisement

Udayavani is now on Telegram. Click here to join our channel and stay updated with the latest news.

Next