Advertisement

Udupi ಇಂದು ಪುತ್ತಿಗೆ ಮೂಲಮಠದಲ್ಲಿ ಸುವರ್ಣ ಸ್ಮತಿ ಸೌಧ ಸಮರ್ಪಣೆ

12:40 AM Dec 31, 2023 | Team Udayavani |

ಉಡುಪಿ: ಹಿರಿಯಡಕದ ಪುತ್ತಿಗೆ ಗ್ರಾಮದ ಶ್ರೀ ಪುತ್ತಿಗೆ ಮೂಲಮಠದಲ್ಲಿ ಡಿ.31ರ ಸಂಜೆ 4.30ರಿಂದ ನಡೆಯುವ ಕಾರ್ಯಕ್ರಮದಲ್ಲಿ ನೂತನ ಸುವರ್ಣ ಸ್ಮತಿ ಸೌಧ ಸಮರ್ಪಣೆ ನಡೆಯಲಿದೆ.

Advertisement

ಬೆಂಗಳೂರಿನ ಸೋಸಲೆ ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶತೀರ್ಥ ಶ್ರೀಪಾದರು ಉದ್ಘಾಟಿಸಿ ಸಮರ್ಪಿಸಲಿದ್ದಾರೆ. ಭಾವೀ ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಶಿಷ್ಯರಾದ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಉಪಸ್ಥಿತರಿರಲಿದ್ದಾರೆ.

ಹೈಕೋರ್ಟ್‌ ನ್ಯಾಯಮೂರ್ತಿ ಪಿ.ಎಸ್‌.ದಿನೇಶ್‌ ಕುಮಾರ್‌ ಅಧ್ಯಕ್ಷತೆ ವಹಿಸುವರು. ವಿವಿಧ ಕ್ಷೇತ್ರದ ಪ್ರಮುಖರು ಭಾಗವಹಿಸಲಿದ್ದಾರೆ ಮತ್ತು ಶ್ರೀ ಪುತ್ತಿಗೆ ವಿದ್ಯಾಪೀಠದ ವಿದ್ಯಾರ್ಥಿಗಳಿಂದ ಪ್ರತಿಭಾರ್ಪಣಮ್‌ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next