Advertisement

ಕಟೀಲು ದೇವರಿಗೆ ಸ್ವರ್ಣಪಾದುಕೆ ಸಮರ್ಪಣೆ

12:16 AM Jun 20, 2024 | Team Udayavani |

ಕಟೀಲು: ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ 36ನೆಯ ಅಧಿಪತಿಗಳಾದ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಸನ್ಯಾಸ ಸ್ವೀಕಾರ ಸುವರ್ಣ ಮಹೋತ್ಸವ (1974-2024)ದ ಸಂಸ್ಮರಣಾರ್ಥ ಶ್ರೀಕ್ಷೇತ್ರ ಕಟೀಲು ಶ್ರೀ ದುರ್ಗಾಪರಮೇಶ್ವರೀ ಅಮ್ಮನವರಿಗೆ ಶೃಂಗೇರಿ ಶಾರದಾ ಪೀಠದ ವತಿಯಿಂದ 40 ಲಕ್ಷ ರೂ. ಮೌಲ್ಯದ ಸ್ವರ್ಣಪಾದುಕೆ ಹಾಗೂ ಒಡ್ಯಾಣವನ್ನು ಸಮರ್ಪಿಸಲಾಯಿತು.

Advertisement

ಶೃಂಗೇರಿಯಲ್ಲಿ ಉಭಯ ಜಗದ್ಗುರುಗಳು ಈ ಪಾದುಕೆ ಹಾಗೂ ಒಡ್ಯಾಣವನ್ನು ಕಟೀಲು ದೇಗುಲದ ಆನುವಂಶಿಕ ಅರ್ಚಕರಾದ ಹರಿನಾರಾಯಣದಾಸ ಆಸ್ರಣ್ಣರಿಗೆ ಹಸ್ತಾಂತರಿಸಿದರು. ಈ ಪಾದುಕೆ ಮತ್ತು ಒಡ್ಯಾಣವನ್ನು ಬುಧವಾರ ಶ್ರೀದೇವಿಗೆ ತೊಡಿಸಿ ಅಲಂಕಾರ ಮಾಡಲಾಯಿತು. ಶೃಂಗೇರಿ ಶ್ರೀ ಮಠದ ಶಿಷ್ಯರಾದ ಆಂಧ್ರಪ್ರದೇಶದ ಪೋಲಿಸೆಟ್ಟಿ ಶ್ಯಾಮ್‌ ಸುಂದರ್‌ ಅವರು ಇದನ್ನು ಸೇವೆಯಾಗಿ ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next