Advertisement

ಕಂದಾಯ ಇಲಾಖೆಗೆ ಡೀಮ್ಡ್ ಅರಣ್ಯ ಸ್ಥಳ

03:09 AM Sep 26, 2020 | Hari Prasad |

ಬೆಂಗಳೂರು: ಅರಣ್ಯ ಭೂಮಿಯಲ್ಲಿ ಕೃಷಿ ನಡೆಸುತ್ತಿರುವ ಮತ್ತು ಮನೆ ಕಟ್ಟಿಕೊಂಡಿರುವ ಜನರಿಗೆ ಅನುಕೂಲವಾಗುವಂತೆ ರಾಜ್ಯದ 6.64 ಲಕ್ಷ ಹೆಕ್ಟೇರ್‌ ಡೀಮ್ಡ್ ಅರಣ್ಯ ಪ್ರದೇಶವನ್ನು ಕಂದಾಯ ಇಲಾಖೆಗೆ ವರ್ಗಾಯಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದ್ದಾರೆ.

Advertisement

ವಿಧಾನಸಭೆಯಲ್ಲಿ ಭೂ ಕಂದಾಯ ತಿದ್ದುಪಡಿ ಮಸೂದೆಯನ್ನು ಮಂಡಿಸಿದ ಅವರು, ಬಗರ್‌ ಹುಕುಂ ಸಾಗುವಳಿದಾರರಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಎರಡು ವರ್ಷಗಳ ಕಾಲ ವಿಸ್ತರಿಸಲಾಗಿದೆ ಎಂದರು.

ಅರಣ್ಯ ಭೂಮಿ ಮತ್ತು ರೈತರ ಸಮಸ್ಯೆಯನ್ನು ಅರಿತು 9.94 ಲಕ್ಷ ಹೆ. ಡೀಮ್ಡ್ ಅರಣ್ಯ ಪ್ರದೇಶದಲ್ಲಿ 6.64 ಲಕ್ಷ ಹೆ. ಡೀಮ್ಡ್ ಅರಣ್ಯ ಪ್ರದೇಶವನ್ನು ಕಂದಾಯ ಇಲಾಖೆಗೆ ಬಿಟ್ಟುಕೊಡಲು ತೀರ್ಮಾನಿಸಲಾಗಿದೆ.

ಉಳಿದ 3.30 ಲಕ್ಷ ಹೆಕ್ಟೇರ್‌ ಡೀಮ್ಡ್ ಅರಣ್ಯ ಪ್ರದೇಶದಲ್ಲಿಯೂ ಯಾರಾದರೂ ಮನೆ ಕಟ್ಟಿಕೊಂಡು ಕೃಷಿ ನಡೆಸುತ್ತಿದ್ದರೆ ಅವರಿಗೂ ಅವಕಾಶ ಕಲ್ಪಿಸಲಾಗುವುದು. ಇದರಿಂದ ಅರಣ್ಯ ಇಲಾಖೆ ಜತೆಗಿನ ಸಾಮಾನ್ಯ ಜನರ ಗೊಂದಲ ನಿವಾರಣೆಯಾಗಲಿದೆ ಎಂದು ಅರಣ್ಯ ಸಚಿವ ಆನಂದ್‌ ಸಿಂಗ್‌ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next