Advertisement

ಕೆಂಪುಕೋಟೆ ಗಲಭೆ ಪ್ರಕರಣ: ನಟ ದೀಪ್ ಸಿಧು ಬಂಧಿಸಿದ ದಿಲ್ಲಿ ಪೊಲೀಸರು

09:39 AM Feb 09, 2021 | Team Udayavani |

ಹೊಸದಿಲ್ಲಿ: ಜನವರಿ 26ರಂದು ಕೆಂಪುಕೋಟೆಯ ಬಳಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಲ್ಲಿ ಪೊಲೀಸರು ನಟ ದೀಪ್ ಸಿಧುವನ್ನು ಬಂಧಿಸಿದ್ದಾರೆ.

Advertisement

ಗಣರಾಜ್ಯೋತ್ಸವ ದಿನದಂದು ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ ಆರೋಪದಡಿ ದೀಪ್ ಸಿಧು ಬಂಧನವಾಗಿದೆ. ಆ ದಿನದಿಂದಲೇ ಪೊಲೀಸರು ನಟನನ್ನು ಹುಡುಕುತ್ತಿದ್ದು, ತಲೆಮರೆಸಿಕೊಂಡಿದ್ದ. ಇದೀಗ ಪೊಲೀಸರು ಬಂಧಸಿದ್ದು, ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ:ಜೋ ಬೈಡೆನ್ ಜೊತೆ ಮೋದಿ ಮಾತುಕತೆ: ದ್ವಿಪಕ್ಷೀಯ ಬಾಂಧವ್ಯ ವೃದ್ದಿಯ ಕುರಿತು ಚರ್ಚೆ

ಟ್ರ್ಯಾಕ್ಟರ್ ರ್ಯಾಲಿಯ ವೇಳೆ ಕೆಂಪುಕೋಟೆಗೆ ನುಗ್ಗಿದ್ದ ಪ್ರತಿಭಟನಾಕಾರರು ಕೆಂಪುಕೋಟೆಯ ಮುಂಭಾಗದ ಧ್ವಜಸ್ಥಂಬ ಹತ್ತಿ ಸಿಖ್ ಧ್ವಜಗಳನ್ನು ಹಾರಿಸಿದ್ದರು.

ಈ ಘಟನೆಗಳಿಗೆ ಸಂಬಂಧಿಸಿದಂತೆ ಇತ್ತೀಚಿಗಷ್ಟೇ ದಿಲ್ಲಿ ಪೊಲೀಸರು 12 ಮಂದಿ ಪ್ರಮುಖ ಆರೋಪಿಗಳ ಭಾವಚಿತ್ರವನ್ನು ಬಿಡುಗಡೆಗೊಳಿಸಿದ್ದರು. ದೀಪ್ ಸಿಧು ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next