Advertisement

ಪಾಕಿಸ್ಥಾನಕ್ಕೆ ‘ಆಕಸ್ಮಿಕ’ಕ್ಷಿಪಣಿ ಉಡಾವಣೆ : ರಕ್ಷಣಾ ಸಚಿವಾಲಯ ವಿಷಾದ

07:34 PM Mar 11, 2022 | Team Udayavani |

ನವದೆಹಲಿ : ತಾಂತ್ರಿಕ ದೋಷದಿಂದಾಗಿ ಪಾಕಿಸ್ಥಾನಕ್ಕೆ ಆಕಸ್ಮಿಕ ಕ್ಷಿಪಣಿ ಉಡಾವಣೆ ಯಾಗಿದೆ ಎಂದು ಭಾರತದ ರಕ್ಷಣಾ ಸಚಿವಾಲಯ ಶುಕ್ರವಾರ ಹೇಳಿದ್ದು,ಈ ಘಟನೆಯು ತೀವ್ರವಾಗಿ ವಿಷಾದನೀಯವಾಗಿದೆ ಎಂದಿದೆ.

Advertisement

ಭಾರತದಿಂದ ಉಡಾವಣೆಗೊಂಡ ಅತಿವೇಗದ ಕ್ಷಿಪಣಿ ಪಾಕಿಸ್ಥಾನದ ವಾಯುಪ್ರದೇಶವನ್ನು ಪ್ರವೇಶಿಸಿ ಖನೇವಾಲ್ ಜಿಲ್ಲೆಯ ಮಿಯಾನ್ ಚನ್ನು ಬಳಿ ಬಿದ್ದಿದೆ ಎಂದು ಪಾಕಿಸ್ಥಾನ ಸೇನೆ ಗುರುವಾರ ತಿಳಿಸಿತ್ತು.

ಭಾರತ ಸರ್ಕಾರವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ ಮತ್ತು ಉನ್ನತ ಮಟ್ಟದ ನ್ಯಾಯಾಲಯದ ವಿಚಾರಣೆಗೆ ಆದೇಶಿಸಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಮಾರ್ಚ್ 9 ರಂದು, ವಾಡಿಕೆಯ ನಿರ್ವಹಣೆಯ ಸಂದರ್ಭದಲ್ಲಿ, ತಾಂತ್ರಿಕ ದೋಷವು ಆಕಸ್ಮಿಕವಾಗಿ ಕ್ಷಿಪಣಿಯನ್ನು ಹಾರಿಸಲು ಕಾರಣವಾಯಿತು, ”ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next