Advertisement

ಚಿಕ್ಕಬಳ್ಳಾಪುರ: ಬಾವಿಗೆ ಬಿದ್ದಿದ್ದ ಜಿಂಕೆ ಸುರಕ್ಷಿತವಾಗಿ ಅರಣ್ಯಕ್ಕೆ

11:13 AM Mar 05, 2022 | Team Udayavani |

ಚಿಕ್ಕಬಳ್ಳಾಪುರ: ತಾಲೂಕಿನ ಜಡಲತಿಮ್ಮನಹಳ್ಳಿ ಗ್ರಾಮದ ರೈತರೊಬ್ಬರ ಬಾವಿವೊಂದರಲ್ಲಿ ಸಿಲುಕಿದ್ದ ಜಿಂಕೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಹಿಡಿದು ಸುರಕ್ಷಿತವಾಗಿ ಅರಣ್ಯ ಪ್ರದೇಶದಲ್ಲಿ ಬಿಟ್ಟಿದ್ದಾರೆ.

Advertisement

ಬೇಸಿಗೆ ಆರಂಭವಾಗಿದೆ ಆಹಾರದ ಹುಡುಕಾಟದಲ್ಲಿ ವನ್ಯಜೀವಿಗಳು ನಾಡಿಗೆ ಲಗ್ಗೆ ಇಡುವುದು ಸಾಮಾನ್ಯ ಇಂದು ತಾಲೂಕಿನ ಜಡಲತಿಮ್ಮನಹಳ್ಳಿ ಗ್ರಾಮದಲ್ಲಿ ಜಿಂಕೆ ಬಾವಿಯೊಂದರಲ್ಲಿ ಬಿದ್ದಿದೆ ಎಂದು ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ ಕೂಡಲೇ ಕಾರ್ಯಪ್ರವೃತರಾದ ಜಿಲ್ಲಾ ಉಪ ಅರಣ್ಯಾಧಿಕಾರಿ ಅರಸಲನ್ ಅವರು ತಮ್ಮ ಸಿಬ್ಬಂದಿಗಳ ಮೂಲಕ ಜಿಂಕೆಯನ್ನು ಹಿಡಿದು ತಾಲೂಕಿನ ಸೂಲಾಲಪ್ಪನದಿನ್ನೆ ಅರಣ್ಯ ಪ್ರದೇಶದಲ್ಲಿ ಬಿಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next