Advertisement

ನ್ಯಾ| ರಂಜನ್‌ ವಿರುದ್ಧ ಮಾನನಷ್ಟ ಮೊಕದ್ದಮೆ

12:31 AM May 12, 2023 | Team Udayavani |

ಹೊಸದಿಲ್ಲಿ: ರಾಜ್ಯಸಭಾ ಸಂಸದ, ಸುಪ್ರೀಂ ಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ಅವರ ವಿರುದ್ಧ ಅಸ್ಸಾಂ ಲೋಕೋಪಯೋಗಿ (ಎಪಿಡಬ್ಲ್ಯು) ಅಧ್ಯಕ್ಷ ಅಭಿಜಿತ್‌ ಶರ್ಮಾ 1 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆಂದು ವರದಿಯಾಗಿದೆ.

Advertisement

ಗೊಗೋಯ್‌ ಅವರ ಆತ್ಮಕಥೆ “ಜಸ್ಟೀಸ್‌ ಫಾರ್‌ಎ ಜಡ್ಜ್’ ಪುಸ್ತಕ ಇನ್ನೇನು ಬಿಡು ಗಡೆಯಾಗಬೇಕಿತ್ತು. ಆದರೆ ಪುಸ್ತಕದಲ್ಲಿ ತಮ್ಮ ವಿರುದ್ಧ ಗೊಗೋಯ್‌ ಅವಮಾನಕರ ಉಲ್ಲೇಖಗಳನ್ನು ಮಾ ಡಿದ್ದಾರೆ ಎಂದು ಅಭಿಜಿತ್‌ ಆರೋಪಿ ಸಿದ್ದಾರೆ. ಈ ಹಿನ್ನೆಲೆಯಲ್ಲಿ ಪುಸ್ತಕ ಬಿಡುಗಡೆಗೂ ತಡೆ ಕೋರಿ ಅರ್ಜಿ ಸಲ್ಲಿಸಿದ್ದಾರಲ್ಲದೇ ಗೊಗೋಯ್‌ ಹಾಗೂ ಪುಸ್ತಕದ ಪ್ರಕಾಶಕರಾದ ರೂಪಾ ಪಬ್ಲಿಕೇಶನ್ಸ್‌ ಅವರ ವಿರುದ್ಧವೂ ಮೊಕ ದ್ದಮೆ ದಾಖಲಿಸಿದ್ದಾರೆ. ಅರ್ಜಿದಾರರು ಹಾಗೂ ಪ್ರತಿವಾದಿಗಳಿಬ್ಬರಿಗೂ ಸಮನ್ಸ್‌ ಜಾರಿಗೊಳಿಸಲಾಗಿದೆ. ಮುಂದಿನ ವಿಚಾ ರಣೆಯನ್ನು ಜೂನ್‌ 3ಕ್ಕೆ ನಿಗದಿಪಡಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next