Advertisement

ಕಲಬುರಗಿ; ಸೋಲಿಲ್ಲದ ಸರದಾರ ಖರ್ಗೆಗೆ ಮುಖಭಂಗ, ಸುಮಲತಾ ಅಂಬರೀಶ್ ಜಯಭೇರಿ

04:35 PM May 24, 2019 | Nagendra Trasi |

ಕಲಬುರಗಿ/ಮಂಡ್ಯ:ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ಸ್ಟಾರ್ ಕ್ಷೇತ್ರವಾಗಿದ್ದ ಕಲಬುರಗಿಯಲ್ಲಿ ಸೋಲಿಲ್ಲದ ಸರದಾರರಾಗಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಿಜೆಪಿಯ ಡಾ.ಉಮೇಶ್ ಜಾಧವ್ ಪರಾಜಯಗೊಳಿಸಿದ್ದಾರೆ.

Advertisement

ಜಿದ್ದಾಜಿದ್ದಿನ ಲೋಕಸಭಾ ಕ್ಷೇತ್ರವಾಗಿದ್ದ ಕಲಬುರಗಿಯಲ್ಲಿ ಡಾ.ಉಮೇಶ್ ಜಾಧವ್ 6,42,510 ಮತ ಗಳಿಸಿದ್ದರೆ, ಕಾಂಗ್ರೆಸ್ ಪಕ್ಷದ ಮಲ್ಲಿಕಾರ್ಜುನ ಖರ್ಗೆ 5,51,632 ಮತ ಪಡೆದಿದ್ದಾರೆ. ಸುಮಾರು ಒಂದು ಲಕ್ಷಕ್ಕೂ ಅಧಿಕ ಮತಗಳಿಂದ ಖರ್ಗೆ ಹೀನಾಯವಾಗಿ ಸೋಲು ಕಂಡಿದ್ದಾರೆ.

ಮಂಡ್ಯದಲ್ಲಿ ಸುಮಲತಾ ಜಯಭೇರಿ:

ಕರ್ನಾಟಕದ ಲೋಕಸಭಾ ಚುನಾವಣೆಯಲ್ಲಿ ತೀವ್ರ ಕುತೂಹಲ, ಜಿದ್ದಾಜಿದ್ದಿನ ಕಣವಾಗಿದ್ದ ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆಲುವು ಸಾಧಿಸಿದ್ದು, ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ತೀವ್ರ ಹಿನ್ನಡೆ ಅನುಭವಿಸುವ ಮೂಲಕ ಸೋಲಿನ ರುಚಿ ಕಂಡಿದ್ದಾರೆ.

ಸುಮಲತಾ ಅಂಬರೀಶ್ 4,28,781 ಮತ ಗಳಿಸಿದ್ದರೆ, ನಿಖಿಲ್ ಕುಮಾರಸ್ವಾಮಿ 3,79,413 ಮತ ಪಡೆದಿದ್ದಾರೆ. ಮತ್ತೊಬ್ಬ ಪಕ್ಷೇತರ ಅಭ್ಯರ್ಥಿ ಸುಮಲತಾ ಕೇವಲ 5,430 ಮತ ಹಾಗೂ ಎಂ ಸುಮಲತಾ 5,191 ಮತ ಗಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next