Advertisement
ಅವರು ರವಿವಾರ ಇಲ್ಲಿನ ಹರಿಪ್ರಸಾದ್ ಹೊಟೇಲ್ನ ಅಕ್ಷತಾ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ವಿಪಕ್ಷಗಳ ಅಪಪ್ರಚಾರದಿಂದಾಗಿ ಸೋಲನ್ನು ಅನುಭವಿಸ ಬೇಕಾಯಿತು. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಒತ್ತು ನೀಡಲು ಆತ್ಮಾವ ಲೋಕನ ಸಭೆ ನಡೆಸಲಾಗುತ್ತಿದೆ. ಪ್ರತೀ ರವಿವಾರ ಎರಡು ಬ್ಲಾಕ್ಗಳಿಗೆ
ಭೇಟಿ ನೀಡಿ ಕಾರ್ಯಕರ್ತರ ಜತೆ ಸಭೆ ನಡೆಸಲಾಗುವುದು ಎಂದರು. ವಿಧಾನ ಪರಿಷತ್ ಸದಸ್ಯ ಪ್ರತಾಪ್ಚಂದ್ರ ಶೆಟ್ಟಿ ಮಾತನಾಡಿ, ಪೈಪ್ಲೈನ್ ಹಾದು ಹೋಗುವ ಗ್ರಾಮಗಳ ಜನತೆಗೆ ಕಚ್ಛಾ ನೀರು ಕೊಟ್ಟು ಉಡುಪಿಗೆ ಮಾತ್ರ ಶುದ್ಧ ಕುಡಿಯುವ ನೀರು ಕೊಡುತ್ತೇವೆ ಎನ್ನುವ ವಾರಾಹಿ ಅಮೃತ್ ಯೋಜನೆ ಅಮಾನವೀಯ. ಉಡುಪಿಗೆ ನೀರು ಕೊಡುವುದಕ್ಕೆ ವಿರೋಧವಿಲ್ಲ. ಆದರೆ ಪೈಪ್ಲೈನ್ಗಾಗಿ ಭೂಸ್ವಾಧೀನ ಮಾಡದೆ 38 ಕಿ.ಮೀ. ರಸ್ತೆಯನ್ನು ಅಗೆದು ಪೈಪ್ ಕೊಂಡೊಯ್ಯುತ್ತೇವೆ ಎನ್ನುವುದು ರಾಷ್ಟ್ರ ದ್ರೋಹಕ್ಕೆ ಸಮ ಎಂದು ಆಕ್ರೋಶ ವ್ಯಕ್ತಪಡಿಸಿದರು.
Related Articles
Advertisement
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ ಸ್ವಾಗತಿಸಿ, ನಾರಾಯಣ ಆಚಾರ್ಯ ನಿರ್ವಹಿಸಿ, ವಂದಿಸಿದರು.
ಭ್ರಷ್ಟಾಚಾರದಿಂದ ಪಕ್ಷಕ್ಕೆ ಹಿನ್ನಡೆಸೋಲಿನ ಸಂದರ್ಭದಲ್ಲೂ ಆತ್ಮಾವ ಲೋಕನ ಮಾಡಿಕೊಳ್ಳಬೇಕು. 94ಸಿ ಯಂತಹ ಉತ್ತಮ ಯೋಜನೆ ನಮ್ಮ ಸರಕಾರ ಕೊಟ್ಟರೂ ಹಣ ಕೊಟ್ಟರೆ ಮಾತ್ರ ಹಕ್ಕುಪತ್ರ ಮಂಜೂರು ಮಾಡುವ ಅಧಿಕಾರಿ ಗಳ ಭ್ರಷ್ಟತನದಿಂದ ನಮ್ಮ ಪಕ್ಷಕ್ಕೆ ಹಿನ್ನಡೆಯಾಗಿದೆ ಎಂದು ಪ್ರತಾಪ್ಚಂದ್ರ ಶೆಟ್ಟಿ ಹೇಳಿದರು.