Advertisement

TRS ಹೆಸರು BRS ಆಗಿದ್ದಕ್ಕೆ ತೆಲಂಗಾಣದಲ್ಲಿ ಸೋಲು

12:40 AM Jan 14, 2024 | Team Udayavani |

ಹೈದರಾಬಾದ್‌: ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್‌) ಪಕ್ಷದ ಹೆಸರನ್ನು ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಎಂದು ಬದಲಿಸಿದ್ದೇ ಇತ್ತೀಚೆಗೆ ನಡೆದ ತೆಲಂಗಾಣ ಚುನಾವಣೆಯಲ್ಲಿ ಸೋಲಿಗೆ ಕಾರಣ. ಹೀಗಾಗಿ, ಮತ್ತೆ ಪಕ್ಷದ ಹೆಸರನ್ನು ತೆಲಂಗಾಣ ರಾಷ್ಟ್ರ ಸಮಿತಿ ಎಂದು ಬದಲಿಸಲು ಬೇಡಿಕೆ ಹೆಚ್ಚತೊಡಗಿದೆ. ಈ ಬಗ್ಗೆ ಪಕ್ಷದ ಕಾರ್ಯಾಧ್ಯಕ್ಷ ಮತ್ತು ಮಾಜಿ ಡಿಸಿಎಂ ಕೆ.ಟಿ.ರಾಮ ರಾವ್‌ ಅವರಿಗೆ ಪಕ್ಷದ ಕಾರ್ಯಕರ್ತರು ಸಲಹೆಗಳನ್ನು ನೀಡಿದ್ದಾರೆ.

Advertisement

ಬಿಆರ್‌ಎಸ್‌ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್‌ ಮಾತನಾಡಿ ತೆಲಂಗಾಣ ರಾಷ್ಟ್ರ ಸಮಿತಿ ಹೆಸರಿನಿಂದ ತೆಲಂಗಾಣ ಪದವನ್ನು ತೆಗೆದುಹಾಕಿದ್ದು ಮೇಲ್ನೋಟಕ್ಕೆ ರಾಜ್ಯದ ಜತೆಗೆ ಸಂಬಂಧವನ್ನು ಕಡಿದುಕೊಂಡಂತೆ ಆಗಿದೆ ಎಂದಿದ್ದಾರೆ. ಇತ್ತೀಚಿನ ವಿಧಾನಸಭೆ ಚುನಾ ವಣೆಯಲ್ಲಿ ಸೋಲಿನ ಕಾರಣಗಳನ್ನು ಕಂಡು ಕೊಳ್ಳಲು ಮತ್ತು ಮುಂದಿನ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆ.ಟಿ.ರಾಮ ರಾವ್‌ ಮತ್ತು ಇತರರು ಈಗ ಪ್ರತೀ ಲೋಕಸಭಾ ಕ್ಷೇತ್ರಕ್ಕೆ ತೆರಳಿ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಆ ಸಂದರ್ಭದಲ್ಲಿ ಹೆಸರು ಬದಲಾವಣೆ ಮಾಡಿದ್ದೇ ಸೋಲಿಗೆ ಕಾರಣ ಎಂದು ಕಾರ್ಯಕರ್ತರು ಹೇಳಿದ್ದಾರೆ.

2022ರಲ್ಲಿ ಕೆ.ಚಂದ್ರಶೇಖರ ರಾವ್‌ ಅವರು ಟಿಆರ್‌ಎಸ್‌ ಅನ್ನು ರಾಷ್ಟ್ರ ಮಟ್ಟಕ್ಕೆ ವಿಸ್ತರಿಸುವ ನಿಟ್ಟಿನಲ್ಲಿ ಭಾರತ ರಾಷ್ಟ್ರ ಸಮಿತಿ ಎಂದು ಬಲಾಯಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next