Advertisement

ಹೊಸಬರಿಗೆ ಟಿಕೆಟ್ ನೀಡಿದ್ದಕ್ಕೆ ಸೋಲಾಯ್ತು: ರಮೇಶ ಜಿಗಜಿಣಗಿ

08:27 PM Jun 13, 2023 | Shreeram Nayak |

ವಿಜಯಪುರ: ವಿಧಾನಸಭೆ ಚುನಾವಣೆಯಲ್ಲಿ 70 ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಮಣೆ ಹಾಕಿದ್ದೇ ಬಿಜೆಪಿ ಸೋಲಿಗೆ ಪ್ರಮುಖ ಕಾರಣವಾಯ್ತು ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಅಸಮಾಧಾನ ವ್ಯಕ್ತಪಡಿಸಿದರು.

Advertisement

ವಿಜಯಪುರ ಹೊರ ವಲಯದ ಅಲಿಯಾಬಾದ್‍ನ ಗೂಡ್ಸ್‍ಸೆಡ್ ಯೋಜನೆ ಸ್ಥಳಕ್ಕೆ ಭೇಟಿ ನೀಡಿ, ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಆಯ್ಕೆಯಲ್ಲಿ ನಾವು ಸೋತಿದ್ದೇ ಚುನಾವಣೆಯಲ್ಲೂ ಸೋಲುವುದಕ್ಕೆ ಕಾರಣವಾಗಿದೆ ಎಂದು ಹರಿಹಾಯ್ದರು.

ರಾಜ್ಯದ ಸುಮಾರು 70 ಕ್ಷೇತ್ರಗಳಲ್ಲಿ ಹೊಸಮುಖಗಳಿಗೆ ಅವಕಾಶ ಕಲ್ಪಿಸಿದ್ದೇ ಸೋಲಿಗೆ ಕಾರಣವಾಗಿದ್ದು, ಹೊಸಬರಿಗೆ ಟಿಕೆಟ್ ನೀಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಕಿಡಿ ಕಾರಿದ ಸಂಸದ ಜಿಗಜಿಣಗಿ, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ ಐದು ಗ್ಯಾರಂಟಿ ಯೋಜನೆಗಳೂ ಬಿಜೆಪಿ ಸರ್ಕಾರ ಕಳೆದುಕೊಳ್ಳುವುದಕ್ಕೆ ಮತ್ತೊಂದು ಕಾರಣ ಎಂದು ವಿಶ್ಲೇಷಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next