Advertisement

ನೈತಿಕ ಪೊಲೀಸ್‌ಗಿರಿಗೂ ಬಿಜೆಪಿಗೂ ಸಂಬಂಧವಿಲ್ಲ

07:20 AM Apr 29, 2018 | Team Udayavani |

ಬೆಂಗಳೂರು: ಬಿಜೆಪಿ, ಆರ್‌ಎಸ್‌ಎಸ್‌ ನೈತಿಕ ಪೊಲೀಸ್‌ಗಿರಿ ಮಾಡುತ್ತಿಲ್ಲ. ಪಕ್ಷ ಹಾಗೂ ಆರ್‌ಎಸ್‌ಎಸ್‌ನ ಹೆಸರಿಗೆ ಕಳಂಕ ತರಲು ಈ ರೀತಿಯ ಆರೋಪ ಮಾಡಲಾಗುತ್ತಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದರು.

Advertisement

ನಗರದಲ್ಲಿ ಶನಿವಾರ “ಕರುನಾಡ ಮಹಿಳಾ-ಜಾಗೃತಿ ಸಂವಾದ’ದಲ್ಲಿ ಭಾಗವಹಿಸಿದ ಬಳಿಕ ಪ್ರತಿಕ್ರಿಯಿಸಿದ ಅವರು, ಸಂಘಟನೆಗಳನ್ನು “ಹಿಂದು’ ಎಂಬುದಾಗಿ ಪ್ರತ್ಯೇಕವಾಗಿ ಗುರುತಿಸುವವರಿಗೆ ಸಮಾಜವನ್ನು ಒಡೆಯುವ ಉದ್ದೇಶವಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದಾಗಲೇ ನೈತಿಕ ಪೊಲೀಸ್‌ಗಿರಿ ನಡೆದಿತ್ತು. ಆಗ ಬಿಜೆಪಿ ಸರಕಾರವೇ ಅದರ ವಿರುದ್ಧ ಕಠಿಣ ಕ್ರಮ ಕೈಗೊಂಡಿತ್ತು. ಇಂತಹ ಚಟುವಟಿಕೆಗಳಿಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.

ಸಂಸತ್ತಿನಲ್ಲಿ “ಕಾಸ್ಟಿಂಗ್‌ ಕೌಚ್‌’ ನಡೆಯುತ್ತಿದೆ ಎಂಬುದಾಗಿ ಕಾಂಗ್ರೆಸ್‌ನ ರೇಣುಕಾ ಚೌಧರಿ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌, ಅವರ ಹೇಳಿಕೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.ಚುನಾವಣೆಗಳಲ್ಲಿ ಸ್ಪರ್ಧಿಸಲು ಮಹಿಳೆಯರಿಗೆ ಟಿಕೆಟ್‌ ನೀಡದಿರುವುದು ಲಿಂಗ ತಾರತಮ್ಯವಲ್ಲ ಎಂದು ಅವರು ಹೇಳಿದರು.

ಚರ್ಚೆ ನಡೆದಿದೆ
ಐದಾರು ವರ್ಷ ಯೋಧರಿಗೆ ಸೇವೆ ಸಲ್ಲಿಸಿ ನಿವೃತ್ತರಾದ ನರ್ಸ್‌ಗಳನ್ನು ಮಾಜಿಗಳೆಂದು ಪರಿಗಣಿಸುತ್ತಿಲ್ಲ. ಈ ಸಂಬಂಧ ಬದಲಾವಣೆ ತರಲು ಚರ್ಚೆ ನಡೆದಿದೆ. ನಿವೃತ್ತ ನರ್ಸ್‌ಗಳನ್ನು ಮಾಜಿಗಳೆಂದು ಪರಿಗಣಿಸಿ ಸೌಲಭ್ಯ ನೀಡುವುದು, ಹಾಲಿ ಸಿಬಂದಿಯನ್ನು ಖಾಯಂಗೊಳಿಸುವುದು ಸಹಿತ ಇತರ ಬೇಡಿಕೆಗಳ ಪರ ನಾನಿದ್ದೇನೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next