Advertisement

ಅಧಿಕಾರ ಸ್ವೀಕಾರಕ್ಕೂ ಮುನ್ನ ಸೇನಾ ಸ್ಮಾರಕಕ್ಕೆ ರಾಜನಾಥ್‌ ನಮನ

10:15 AM Jun 02, 2019 | Vishnu Das |

ಹೊಸದಿಲ್ಲಿ: ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಶನಿವಾರ ಕಚೇರಿಯಲ್ಲಿ ಅಧಿಕಾರವಹಿಸಿಕೊಳ್ಳಲಿದ್ದು ಇದಕ್ಕೂ ಮುನ್ನ ರಾಷ್ಟ್ರೀಯ ಸೇನಾ ಸ್ಮಾರಕಕ್ಕೆ ತೆರಳಿ ಹುತಾತ್ಮ ವೀರಯೋಧರಿಗೆ ಗೌರವ ನಮನ ಸಲ್ಲಿಸಿದರು.

Advertisement

ಶುಕ್ರವಾರ ಬೆಳಗ್ಗೆ ವಾರ್‌ ಮೆಮೋರಿಯಲ್‌ಗೆ ರಾಜನಾಥ್‌ ಸಿಂಗ್‌ ಅವರು ಆಗಮಿಸಿದರು. ಈ ವೇಳೆ ಭೂ ಸೇನೆ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌, ಏರ್‌ಚೀಫ್ ಮಾರ್ಷಲ್‌ ಬಿ.ಎಸ್‌.ಧನೋಹಾ, ನೌಕಾಪಡೆ ಮುಖ್ಯಸ್ಥ ಎಡ್ಮಿರಲ್‌ ಕರಮ್‌ಬೀರ್‌ ಸಿಂಗ್‌ ಹಾಜರಿದ್ದರು.

ಗೃಹ ಸಚಿವರಾಗಿ ಕೆಲಸ ಮಾಡಿದ್ದ ರಾಜನಾಥ್‌ ಸಿಂಗ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಈ ಬಾರಿ ರಕ್ಷಣಾ ಖಾತೆಯನ್ನು ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next