Advertisement

ಚಿಂತಾಮಣಿಗೆ ಹಾಲಿ, ಮಾಜಿ ಶಾಸಕರ ಕೊಡುಗೆ ಏನು?

03:42 PM Feb 01, 2018 | Team Udayavani |

ಚಿಂತಾಮಣಿ: ತಾಲೂಕಿನಲ್ಲಿ ಕಳೆದ 65 ವರ್ಷಗಳಿಂದ ಶಾಸಕರ ಆಡಳಿತ ವೈಫ‌ಲ್ಯದಿಂದ ಗ್ರಾಮಾಂತರ ಪ್ರದೇಶಗಳಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ. ಜನತೆ ಮೂಲ ಭೂತ ಸೌಲಭ್ಯಗಳಿಗಾಗಿ ಪರಿತಪಿಸುವಂತಾಗಿದೆ ಎಂದು ಕಾಂಗ್ರೆಸ್‌ ಮುಖಂಡ ವೆಂಕಟೇಶ್‌ರೆಡ್ಡಿ ದೂರಿದರು.

Advertisement

ತಾಲೂಕಿನ ನೆರ್ನಕಲ್ಲು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ 60 ವರ್ಷಗಳಿಂದ ತಾಲೂಕಿನಲ್ಲಿ ಸ್ಥಳೀಯ ಎರಡು ಪ್ರಭಾವಿ ಕುಟುಂಬಗಳ ಆಡಳಿತದಲ್ಲಿ ತಾಲೂಕು ಅಭಿವೃದ್ಧಿ ಕುಂಠಿತಗೊಂಡಿದೆ. ಇದರ ಜೊತೆಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮತ್ತೂಬ್ಬ ವ್ಯಕ್ತಿ ಕ್ಷೇತ್ರಕ್ಕೆ ಆಗಮಿಸಿ ಶಾಸಕರಾದರೂ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ
ಎಂದು ಮಾಜಿ ಶಾಸಕ ಎಂ.ಸಿ.ಸುಧಾಕರ್‌ ಹಾಗೂ ದಿ.ಕೆ. ಎಂ. ಕೃಷ್ಣಾರೆಡ್ಡಿ ವಿರುದ್ಧ ಪರೋಕ್ಷವಾಗಿ ಹರಿಹಾಯ್ದರು.

ಅಭಿವೃದ್ಧಿ ಪ್ರಚಾರ: ಕ್ಷೇತ್ರದಲ್ಲಿ ಕೆಲವರು ನಮ್ಮದು 60 ವರ್ಷಗಳ ಇತಿಹಾಸವುಳ್ಳ ರಾಜಕಾರಣ ಎಂದು ಹೇಳಿಕೊಳ್ಳುತ್ತಾರೆ. ಇದೇ ರೀತಿ ಮತ್ತೂಬ್ಬರು 5 ವರ್ಷಗಳಿಂದ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ ಎಂದು ಪ್ರಚಾರ ಪಡೆಯುತ್ತಿದ್ದಾರೆ. ಆದರೆ, ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಯಾವುದೇ ಅಭಿವೃದ್ಧಿಯಾಗಿಲ್ಲ. ತಾಲೂಕಿನಲ್ಲಿ ರಸ್ತೆಗಳು ಗುಂಡಿಗಳಿಂದ ಕೂಡಿವೆ. ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸಿಲ್ಲ. ಗ್ರಾಮಗಳು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿವೆ. ಆದರೆ, ಇಲ್ಲಿನ
ರಾಜಕೀಯ ನಾಯಕರು ಮಾತ್ರ ಕ್ಷೇತ್ರದಲ್ಲಿ ನಾವು ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ ಎಂದು ಜನರನ್ನು ವಂಚಿಸುತ್ತಿದ್ದಾರೆ ಎಂದು ಹಾಲಿ ಶಾಸಕ ಕೃಷ್ಣಾರೆಡ್ಡಿ ವಿರುದ್ಧ ವಾಗ್ಧಾಳಿ ನಡೆಸಿದರು.

ಕಾಂಗ್ರೆಸ್‌ ಅಭ್ಯರ್ಥಿ: ಕಳೆದ ಒಂದು ವರ್ಷದಿಂದ ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ಹಲವು ರೀತಿಯ ಸಮಾಜ ಸೇವಾ ಕಾರ್ಯಕ್ರಮ ಹಮ್ಮಿಕೊಂಡು ಬಡವರು, ದಿನದಲಿತರು, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ನೆರವಿಗೆ ಧಾವಿಸಿ ಅವರ ಕಷ್ಟ
ಸುಖಗಳಿಗೆ ಸ್ಪಂದಿಸಿದ್ದೇನೆ. ತಮ್ಮ ಸಮಾಜಮುಖೀ ಕಾರ್ಯ ಗುರುತಿಸಿರುವ ಸಂಸದ ಕೆ.ಎಚ್‌.ಮುನಿಯಪ್ಪ ಕಾಂಗ್ರೆಸ್‌ ಟಿಕೆಟ್‌ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚಿಂತಾಮಣಿ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಮತದಾರರು ಆಶೀರ್ವದಿಸಿದರೆ ತಾಲೂಕಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ತಾವು ಏನು ಎಂಬುದನ್ನು ತೋರಿಸುತ್ತೇನೆ ಎಂದು ತಿಳಿಸಿದರು.

ಸಭೆಯಲ್ಲಿ ಮುಖಂಡರಾದ ಚಂದ್ರು, ನಾರಮಾಕಲಹಳ್ಳಿ ಮೂರ್ತಿ, ದೂಪಂ ಪ್ರಸಾದ್‌, ನೆರ್ನಕಲ್ಲು ಗ್ರಾಮದ ಎನ್‌.ಕೆ.ನಾಗರಾಜ್‌, ನಾಗಪ್ಪ, ಎನ್‌.ನಾರಾಯಣಸ್ವಾಮಿ, ಮುರಳಕೃಷ್ಣ, ಲಕ್ಷ್ಮೀಪತಿ, ದೇವರಾಜ್‌, ಮುನಿರಾಜ್‌, ಅನಿಲ್‌ ಕುಮಾರ್‌, ನಾರಾಯಣಸ್ವಾಮಿ, ವೆಂಕಟೇಶ್‌ ಇತರರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next