Advertisement

SSLC ಪರೀಕ್ಷೆಯಲ್ಲಿ ಕರ್ತವ್ಯ ಲೋಪ: ಮೇಲ್ವಿಚಾರಕ, ಕಸ್ಟೋಡಿಯನ್ ಅಮಾನತು

09:28 AM Jul 02, 2020 | sudhir |

ಯಾದಗಿರಿ: ಎಸ್ ಎಸ್ ಎಲ್ ಸಿ ಪರೀಕ್ಷೆಯ ಗಣಿತ ಪ್ರಶ್ನೆ ಪತ್ರಿಕೆ ವಿತರಿಸುವಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪ ಹಿನ್ನೆಲೆ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

Advertisement

ಸುರಪುರ ಕ್ಷೇತ್ರ ಶಿಕ್ಷಣಾಧಿಕಾರಿ ವರದಿ ಹಿನ್ನೆಲೆ ಕೆಂಭಾವಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕ ಪರಮಣ್ಣ ಹಾಗೂ ಪ್ರಶ್ನೆ ಪತ್ರಿಕೆ ಕಸ್ಟೋಡಿಯನ್ ಅಬ್ದುಲ್ ಖೈಯುಂ ಅವರನ್ನು ಅಮಾನತು ಮಾಡಿ ಡಿಡಿಪಿಐ ಶ್ರೀನಿವಾಸರೆಡ್ಡಿ ಆದೇಶಿಸಿದ್ದಾರೆ.

ಜೂನ್ 27 ರಂದು 5 ಜನ ರೆಗ್ಯೂಲರ್ ವಿದ್ಯಾರ್ಥಿಗಳಿಗೆ ಗಣಿತ ಪರೀಕ್ಷೆ ವೇಳೆ ಹಳೆಯ ಪಠ್ಯಕ್ರಮದ ಪ್ರಶ್ನೆ ಪತ್ರಿಕೆ ವಿತರಿಸಿದ್ದು ಬೆಳಕಿಗೆ ಬಂದಿತ್ತು.

ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಸುರೇಶ ಕುಮಾರ ಅವರು ಬುಧವಾರವಷ್ಟೇ ಸೂಕ್ತ ಶಿಸ್ತು ಕ್ರಮದ ಭರವಸೆ ನೀಡಿ, ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ಮೌಲ್ಯಮಾಪನ ನಡೆಸಲಾಗುವುದು ಎಂದಿದ್ದರು. ಸಚಿವರು ಕ್ರಮದ ಮಾತು ಹೇಳುತ್ತಿದ್ದಂತೆ ಡಿಡಿಪಿಐ ಇಬ್ಬರನ್ನು ಅಮಾನತುಗೊಳಿಸಿ ಕ್ರಮಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next