Advertisement

ದ.ಕ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ : ಗೃಹ ಸಚಿವರ ಭೇಟಿಯಾದ ಶಾಸಕರ ನಿಯೋಗ

01:41 PM Dec 15, 2021 | Team Udayavani |

ಬೆಳಗಾವಿ : ದಕ್ಷಿಣ ಕನ್ನಡ ಜಿಲ್ಲೆ ಯಿಂದ ಆಯ್ಕೆಯಾಗಿ ಬಂದಿರುವ ಕರ್ನಾಟಕ ವಿಧಾನಮಂಡಲದ ಸದಸ್ಯರು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಅವರನ್ನು ಇಂದು ಭೇಟಿಯಾಗಿ, ಇತ್ತೀಚೆಗೆ ಜಿಲ್ಲೆಯಲ್ಲಿ ಕೆಲವು ಸಂಘಟನೆಗಳು ನಡೆಸುತ್ತಿರುವ ಚಟುವಟಿಕೆ ಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣ ವಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು.

Advertisement

ನೆರೆಯ ಕೇರಳ ರಾಜ್ಯದಿಂದ ಆಗಮಿಸಿ, ಸ್ಥಳೀಯರ ಜೊತೆಗೆ ಸೇರಿಕೊಂಡು ಕೋಮು ಸಾಮರಸ್ಯ ಕೆಡಿಸುತ್ತಿರುವ ಶಕ್ತಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು, ಬಿಜೆಪಿ ಶಾಸಕರ ನಿಯೋಗ, ಸಚಿವರಲ್ಲಿ ಮನವಿ ಮಾಡಿದೆ.

ಇದನ್ನೂ ಓದಿ :ಪೊಲೀಸರ ಮೇಲಿನ ದಾಳಿ : PFI ನಿಷೇಧಕ್ಕೆ ವಿಶ್ವ ಹಿಂದೂ ಪರಿಷತ್ ಆಗ್ರಹ

ನಿಯೋಗದಲ್ಲಿ, ಸಚಿವ ಎಸ್ . ಅಂಗಾರ, ಶಾಸಕರಾದ ಹರೀಶ್ ಪೂಂಜಾ, ಸಂಜೀವ ಮಠಂದೂರು,ರಾಜೇಶ್ ನಾಯಕ್, ಡಾ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್,ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ನಿಯೋಗದಲ್ಲಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next