Advertisement

ದಿಲ್ಲಿಯಲ್ಲಿ ಗರಿಗೆದರಿದ ರಾಜಕೀಯ

09:44 AM Jan 08, 2020 | Team Udayavani |

ಹೊಸದಿಲ್ಲಿ: ಮುಂಬರುವ ಬಜೆಟ್‌ ಅಧಿವೇಶನದಲ್ಲಿ ಕೇಂದ್ರ ಸರಕಾರವು ದಿಲ್ಲಿ ಕೇಂದ್ರಿತ ಯೋಜನೆಗಳನ್ನು ಪ್ರಕಟಿಸುವಂತಿಲ್ಲ ಮತ್ತು ನಗರಕ್ಕೆ ಸಂಬಂಧಿಸಿದ ಸರಕಾರದ ಸಾಧನೆಗಳನ್ನು ಹೈಲೈಟ್‌ ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ಸೂಚಿಸಿದೆ.
ಫೆ. 8ರಂದು ದಿಲ್ಲಿ ವಿಧಾನಸಭೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಈ ಸೂಚನೆ ನೀಡಲಾಗಿದೆ. ಈ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಚುನಾವಣಾ ಆಯುಕ್ತ ಸುನೀಲ್‌ ಅರೋರಾ ಈ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಕೆಲಸ ಮಾಡಿದ್ರೆ ಓಟ್‌ ಹಾಕಿ
ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಗರಿಗೆದರಿದೆ. ಕಳೆದ 5 ವರ್ಷಗಳಲ್ಲಿ ನಾವು ಚೆನ್ನಾಗಿ ಕೆಲಸ ಮಾಡಿದ್ದೇವೆ ಎಂದು ನಿಮಗನಿಸಿದರೆ ಮಾತ್ರ ನಮಗೆ ಮತ ಹಾಕಿ ಎಂದು ಆಮ್‌ ಆದ್ಮಿ ಪಕ್ಷದ ನಾಯಕ, ಸಿಎಂ ಕೇಜ್ರಿವಾಲ್‌ ಹೇಳಿದ್ದಾರೆ. ಇದೇ ವೇಳೆ, ಮುಂಬರುವ ಚುನಾವಣೆಗೆ ನಾವು ಸಿದ್ಧ ರಾಗಿದ್ದು, ಪ್ರಚಾರಕ್ಕೆ ರೆಡಿ ಯಾಗಿದ್ದೇವೆ ಎಂದು ಕಾಂಗ್ರೆಸ್‌ ಹೇಳಿಕೊಂಡಿದೆ.

ಅಮಿತ್‌ ಶಾ ಟೀಕೆ
ಇನ್ನೊಂದೆಡೆ, ಸಿಎಂ ಕೇಜ್ರಿವಾಲ್‌ ವಿರುದ್ಧ ಟೀಕಾಪ್ರಹಾರ ಮಾಡಿರುವ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ, ‘ದೇಶವಿರೋಧಿ ಘೋಷಣೆ ಕೂಗಿದವರನ್ನು ರಕ್ಷಿಸಲು ಕೇಜ್ರಿವಾಲ್‌ ಮುಂದಾಗಿದ್ದಾರೆ. ತುಕ್ಡೇ ತುಕ್ಡೇ ಗ್ಯಾಂಗನ್ನು ರಕ್ಷಿಸುವ ಸಲುವಾಗಿ 2016ರ ದೇಶದ್ರೋಹ ಪ್ರಕರಣವನ್ನು ಬೇಕೆಂದೇ ವಿಳಂಬ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ. ಅಲ್ಲದೆ, ಆಪ್‌ ಸರಕಾರವು ಜನರ ಏಳಿಗೆಗಾಗಿ ಯಾವ ಕೆಲಸವನ್ನೂ ಮಾಡಿಲ್ಲ ಎಂದೂ ದೂರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next