Advertisement

ದೆಹಲಿಯಲ್ಲಿ ನಿರ್ಮಾಣ ಕಾಮಗಾರಿಗೆ ನಿಷೇಧ

08:45 PM Dec 04, 2022 | Team Udayavani |

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯವು ಗಂಭೀರ ಸ್ವರೂಪಕ್ಕೆ ತಲುಪಿದ್ದು, ದೆಹಲಿ-ಎನ್‌ಸಿಆರ್‌ ಪ್ರದೇಶದಲ್ಲಿ ಅನಗತ್ಯ ನಿರ್ಮಾಣ ಕಾಮಗಾರಿಗಳನ್ನು ನಿಷೇಧಿಸಿ ಕೇಂದ್ರ ಸರ್ಕಾರದ ವಾಯು ಗುಣಮಟ್ಟ ಸಮಿತಿ ಭಾನುವಾರ ಆದೇಶ ಹೊರಡಿಸಿದೆ.

Advertisement

ಭಾನುವಾರ ಸಂಜೆ 4 ಗಂಟೆ ವೇಳೆಗೆ ದೆಹಲಿಯ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ 407ಕ್ಕೆ ತಲುಪಿತ್ತು. ಈ ಹಿನ್ನೆಲೆಯಲ್ಲಿ ಸಂಜೆ ಸಭೆ ಸೇರಿದ ಸಮಿತಿಯು, ವಾಯು ಗುಣಮಟ್ಟ ಮತ್ತಷ್ಟು ಹದಗೆಡದಂತೆ ತಡೆಯುವ ನಿಟ್ಟಿನಲ್ಲಿ ಕೆಲವೊಂದು ನಿರ್ದೇಶನಗಳನ್ನು ನೀಡಿತು.

ಅದರಂತೆ, ತತ್‌ಕ್ಷಣದಿಂದಲೇ ಅತ್ಯಗತ್ಯವಲ್ಲದ ಎಲ್ಲ ನಿರ್ಮಾಣ ಕಾಮಗಾರಿಗಳನ್ನೂ ಸ್ಥಗಿತಗೊಳಿಸಬೇಕು, ಕಟ್ಟಡಗಳ ಧ್ವಂಸ ಕಾರ್ಯವನ್ನೂ ಮಾಡುವಂತಿಲ್ಲ ಎಂದು ಆದೇಶದಲ್ಲಿ ಸೂಚಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next