Advertisement

ಅಯ್ಯರ್‌ ಮರಳಿದರೂ ಡೆಲ್ಲಿ ಕ್ಯಾಪಿಟಲ್ಸ್‌ಗೆ ಪಂತ್‌ ನಾಯಕ 

01:31 AM Sep 17, 2021 | Team Udayavani |

ಹೊಸದಿಲ್ಲಿ: ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕತ್ವದ ಊಹಾಪೋಹಗಳಿಗೆ ತೆರೆ ಬಿದ್ದಿದೆ. ಶ್ರೇಯಸ್‌ ಅಯ್ಯರ್‌ ತಂಡಕ್ಕೆ ಮರಳಿದರೂ ರಿಷಭ್‌ ಪಂತ್‌ ಅವರೇ ಈ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ ಎಂದು ಫ್ರಾಂಚೈಸಿಯ ಸಹ ಮಾಲಕ ಪಾರ್ಥ್ ಜಿಂದಲ್‌ ಗುರುವಾರ ಸ್ಪಷ್ಟ ಪಡಿಸಿದ್ದಾರೆ.

Advertisement

ಇಂಗ್ಲೆಂಡ್‌ ಸರಣಿಯ ವೇಳೆ ಶ್ರೇಯಸ್‌ ಅಯ್ಯರ್‌ ಗಾಯಾಳಾಗಿ ಹೊರಬಿದ್ದ ಬಳಿಕ 2021ರ ಐಪಿಎಲ್‌ಗೆ ರಿಷಭ್‌ ಪಂತ್‌ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕನನ್ನಾಗಿ ನೇಮಿಸಲಾಗಿತ್ತು. ಐಪಿಎಲ್‌ ಮೊದಲಾರ್ಧದಲ್ಲಿ ಡೆಲ್ಲಿ ನಿರ್ವಹಣೆ ಗಮನಾರ್ಹ ಮಟ್ಟದಲ್ಲಿದ್ದು, ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಹೀಗಾಗಿ ಪಂತ್‌ ಅವರನ್ನೇ ಮುಂದುವರಿಸಲು ನಿರ್ಧರಿಸಲಾಗಿದೆ.

ಭುಜದ ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ಶ್ರೇಯಸ್‌ ಅಯ್ಯರ್‌ ಯಾವುದೇ ಸ್ಪರ್ಧಾತ್ಮಕ ಕ್ರಿಕೆಟ್‌ನಲ್ಲಿ ಪಾಲ್ಗೊಂಡಿಲ್ಲ. ನೇರವಾಗಿ ಐಪಿಎಲ್‌ ಆಡುವುದರಿಂದ ಅವರ ಮೇಲಿನ ಒತ್ತಡವನ್ನು ಕಡಿಮೆ ಮಾಡುವುದು ತಂಡದ ಉದ್ದೇಶವಾಗಿರಲೂಬಹುದು.

Advertisement

Udayavani is now on Telegram. Click here to join our channel and stay updated with the latest news.

Next